ಆನೇಕಲ್: ನಿಧಾನಕ್ಕೆ ಮಾತನಾಡಿ ಎಂದು ಹೇಳಿದ್ದಕ್ಕೆ ಚಾಕುವಿನಿಂದ ಇರಿದು ವ್ಯಕ್ತಿಯ ಕೊಲೆ..!

0
Spread the love

ಆನೇಕಲ್: ನಿಧಾನಕ್ಕೆ ಮಾತನಾಡಿ ಎಂದು ಹೇಳಿದ್ದಕ್ಕೆ ವ್ಯಕ್ತಿಯೋರ್ವನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಚಗಯ್ಯನದೊಡ್ಡಿಯಲ್ಲಿ ರಾತ್ರಿ ನಡೆದಿದೆ. ಕೆಂಚಗಯ್ಯನದೊಡ್ಡಿ ನಿವಾಸಿ ಸುರೇಶ್ ಕೊಲೆಯಾದ ವ್ಯಕ್ತಿಯಾಗಿದ್ದು, ಕಾಂತರಾಜು ಹಾಗೂ ಆತನ ಗ್ಯಾಂಗ್ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ.

Advertisement

ಗ್ಯಾರೇಜ್‌ನಲ್ಲಿ ಕೆಲಸ ಮಾಡುತ್ತಿದ್ದ ಸುರೇಶ್, ಶುಕ್ರವಾರ ರಾತ್ರಿ ಮದ್ಯ ಸೇವಿಸಲು ಸ್ನೇಹಿತರ ಜೊತೆ ಶ್ಯಾನುಭೋಗನಹಳ್ಳಿ ತರಂಗಿಣಿ ಬಾರ್‌ಗೆ ತೆರಳಿದ್ದ. ಅದೇ ಬಾರ್‌ನಲ್ಲಿ ಆರೋಪಿ ಕಾಂತರಾಜು ಹಾಗೂ ಆತನ ಗ್ಯಾಂಗ್ ಜೋರಾಗಿ ಮಾತನಾಡುತ್ತಾ ಮದ್ಯಸೇವನೆ ಮಾಡುತ್ತಿದ್ದರು.

ಆಗ ಅಲ್ಲೇ ಮದ್ಯ ಸೇವಿಸುತ್ತಿದ್ದ ಸುರೇಶ್, ನಿಧಾನಕ್ಕೆ ಮಾತನಾಡಿ ಎಂದು ಹೇಳಿದ್ದ. ಆಗ ಕಾಂತರಾಜು ನೀನು ಯಾರು ಕೇಳೋಕೆ ಎಂದು ಹೇಳಿದ್ದ. ಈ ವೇಳೆ ಕಾಂತರಾಜು ಮತ್ತು ಸುರೇಶ್ ನಡುವೆ ನೂಕಾಟ-ತಳ್ಳಾಟ ನಡೆದಿದೆ. ಇದಾದ ಬಳಿಕ ಸುರೇಶ್ ಮನೆಗೆ ತೆರಳಿದ್ದ. ಕಾಂತರಾಜು ಹಾಗೂ ಆತನ ಗ್ಯಾಂಗ್ ಸುರೇಶ್‌ನನ್ನು ಹಿಂಬಾಲಿಸಿಕೊಂಡು ಬಂದಿದ್ದು,

ಆತನ ಮನೆಗೆ ನುಗ್ಗಿ ಪತ್ನಿ ಮುಂದೆಯೇ ಹೊಟ್ಟೆ ಮತ್ತು ಎದೆ ಭಾಗಕ್ಕೆ ಚಾಕುವಿನಿಂದ ಇರಿದು ಎಸ್ಕೇಪ್ ಆಗಿದ್ದರು. ಗಾಯಾಳು ಸುರೇಶನನ್ನು ಕೂಡಲೇ ನಗರದ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಘಟನೆ ಸಂಬಂಧ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here