ಅರಣ್ಯ ಇಲಾಖೆಯ ರಾಯಭಾರಿಯಾಗಿ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಆಯ್ಕೆ: ಸಚಿವ ಈಶ್ವರ್ ಖಂಡ್ರೆ!

0
Spread the love

ಬೆಂಗಳೂರು:-ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಅವರು ಅರಣ್ಯ ಇಲಾಖೆಯ ರಾಯಭಾರಿಯಾಗಲಿದ್ದಾರೆ ಎಂದು ಅರಣ್ಯ ಸಚಿವರು ಸ್ಪಷ್ಟನೆ ಕೊಟ್ಟಿದ್ದಾರೆ.

Advertisement

ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಖ್ಯಾತ ಕ್ರೀಡಾಪಟು, ಮಾಜಿ ಕ್ರಿಕೆಟಿಗ, ಕನ್ನಡಿಗ ಅನಿಲ್ ಕುಂಬ್ಳೆ ಇನ್ನು ಮುಂದೆ ಅರಣ್ಯ ಇಲಾಖೆಯ ರಾಯಭಾರಿಯಾಗಲಿದ್ದಾರೆ. ಅನಿಲ್ ಕುಂಬ್ಳೆ ರಾಯಭಾರಿ ಆಗಿರೋ ವಿಚಾರವನ್ನು ಸ್ಪಷ್ಟಪಡಿಸಿದರು. ಅನಿಲ್ ಕುಂಬ್ಳೆ ಅವರು ಅರಣ್ಯ ಇಲಾಖೆ ರಾಯಭಾರಿಯಾಗಲು ಒಪ್ಪಿಗೆ ನೀಡಿದ್ದಾರೆ ಎಂದು ಹೇಳಿದರು

ಈ ಹಿಂದೆ ಕರ್ನಾಟಕ ವನ್ಯಜೀವಿ ಮಂಡಳಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅನುಭವ ಅನಿಲ್ ಕುಂಬ್ಳೆ ಅವರಿಗೆ ಇದೆ. ಇವರು ವಿಶ್ವಾದ್ಯಂತ ಖ್ಯಾತಿ ಹೊಂದಿದ್ದಾರೆ. ಅನಿಲ್ ಕುಂಬ್ಳೆ ಅವರು ಅರಣ್ಯ ಇಲಾಖೆಗೆ ರಾಯಭಾರಿ ಆಗಲಿದ್ದು, ಅರಣ್ಯ ಸಂರಕ್ಷಣೆ, ಅರಣ್ಯ ಸಂವರ್ಧನೆ, ವೃಕ್ಷ ಸಂರಕ್ಷಣೆ, ವನ್ಯಜೀವಿ ಸಂರಕ್ಷಣೆಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಿದ್ದಾರೆ ಎಂದರು


Spread the love

LEAVE A REPLY

Please enter your comment!
Please enter your name here