HomeGadag Newsಅಣ್ಣಿಗೇರಿಯವರ ಶೈಕ್ಷಣಿಕ ಕೊಡುಗೆ ಅನುಪಮ

ಅಣ್ಣಿಗೇರಿಯವರ ಶೈಕ್ಷಣಿಕ ಕೊಡುಗೆ ಅನುಪಮ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಪರಿಸರದಲ್ಲಿ ಶಿಕ್ಷಣ ಪ್ರೇಮಿ, ತ್ಯಾಗಜೀವಿ ಬಿ.ಜಿ. ಅಣ್ಣಿಗೇರಿ ಗುರುಗಳು ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅನುಪಮವಾದದ್ದು ಎಂದು ಜ. ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ಹೇಳಿದರು.

ಅವರು ಶುಕ್ರವಾರ ನಗರದ ಬಿ.ಜಿ. ಅಣ್ಣಿಗೇರಿ ಗುರುಗಳ ಆಶ್ರಮದಲ್ಲಿ ಶಿಕ್ಷಣ ಪ್ರೇಮಿ, ತ್ಯಾಗಜೀವಿ ಬಿ.ಜಿ.ಅಣ್ಣಿಗೇರಿ ಗುರುಗಳ ಪ್ರತಿಭಾ ಪ್ರತಿಷ್ಠಾನದ ವತಿಯಿಂದ ಆಯೋಜಿಸಿದ್ದ ಅಣ್ಣಿಗೇರಿ ಗುರುಗಳ 6ನೇ ಪುಣ್ಯಸ್ಮರಣೆ, ವಾರ್ಷಿಕ ಸರ್ವಸಾಧಾರಣ ಸಭೆ ಹಾಗೂ ‘ಗುರುಶ್ರೀ’ ಪ್ರಶಸ್ತಿ ಪ್ರದಾನ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದರು.

ಶಿಕ್ಷಕರಾಗಿ, ಮುಖ್ಯೋಪಾಧ್ಯಾಯರಾಗಿ ಬಿ.ಜಿ. ಅಣ್ಣಿಗೇರಿ ಅವರ ಸೇವೆ ಶ್ಲಾಘನೀಯ. ಅವರು ವ್ಯಕ್ತಿಯಾಗಿ, ಅದಮ್ಯ ಶಕ್ತಿಯಾಗಿ, ಗುರುಕುಲ ಮಾದರಿಯ ಆಶ್ರಮವಾಗಿ ಸಲ್ಲಿಸಿದ ಸೇವೆ ಎಂದಿಗೂ ಮರೆಯಲಾರದು. ವಿದ್ಯಾರ್ಥಿಗಳಿಗೆ ಉಚಿತ ಪಾಠ ಹೇಳಿ, ಅನ್ನ, ವಸತಿ ನೀಡಿದ ಮಹಾತ್ಮರು ಎಂದು ಬಣ್ಣಿಸಿದರು.

ಅಣ್ಣಿಗೇರಿ ಅವರ ಶಿಷ್ಯರು ರಾಜ್ಯಕ್ಕೆ ರ‍್ಯಾಂಕ್ ತರುವ ಮೂಲಕ ಗುರುವಿನ ಹೆಸರನ್ನು, ಆಶ್ರಮದ ಹೆಸರನ್ನು ಚಿರಸ್ಥಾಯಿಗೊಳಿಸಿದವರು. ಅಣ್ಣಿಗೇರಿ ಅವರ ಸಾವಿರಾರು ಪ್ರತಿಭಾನ್ವಿತ ಶಿಷ್ಯರು ರಾಜ್ಯ, ದೇಶ-ವಿದೇಶಗಳಲ್ಲಿ ಅತ್ಯುನ್ನತ ಸ್ಥಾನದಲ್ಲಿರುವದು ಅಣ್ಣಿಗೇರಿ ಅವರ ಮೇರು ವ್ಯಕ್ತಿತ್ವವನ್ನು ಪ್ರತಿಬಿಂಬಿಸುತ್ತದೆ ಎಂದರು.

ಗದುಗಿನ ಎಂ.ಎ. ಸಂಸ್ಕೃತ ವಿದ್ವಾನ್‌ರಾದ ಎನ್.ಎನ್. ಭಟ್ ಅವರಿಗೆ ಶ್ರೀಗಳು ‘ಗುರುಶ್ರೀ’ ಪ್ರಶಸ್ತಿ ಪ್ರದಾನ ಮಾಡಿ ಆಶೀರ್ವದಿಸಿದರು. ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಎನ್.ಎನ್. ಭಟ್, ಬಿ.ಜಿ. ಅಣ್ಣಿಗೇರಿ ಗುರುಗಳು ಆಗಿನ ದಿನಗಳಲ್ಲೇ ಅಪರೂಪದ ಶಿಕ್ಷಕರಾಗಿದ್ದರು. ಸರಳ, ಸಜ್ಜನಿಕೆಯ ಸನ್ಯಾಸಿ ಜೀವನ ನಡೆಸಿದವರು. ಶಿಕ್ಷಣದಲ್ಲಿ ಅಪಾರ ಪಾಂಡಿತ್ಯ ಹೊಂದಿದ ಮೇಧಾವಿ ಅವರಾಗಿದ್ದರು. ಆ ಕಾರಣಕ್ಕಾಗಿಯೇ ಅವರ ಮಾರ್ಗದರ್ಶನದಲ್ಲಿ ಶಿಷ್ಯರು ದೊಡ್ಡ ದೊಡ್ಡ ಹುದ್ದೆಯಲ್ಲಿದ್ದು ಜೀವನವನ್ನು ಸಾರ್ಥಕ ಮಾಡಿಕೊಂಡಿದ್ದಾರೆ. ಇಂತಹ ಮಹಾನ್ ವ್ಯಕ್ತಿಯ ಹೆಸರಿನಲ್ಲಿ ನೀಡಲಾಗುವ ಪ್ರತಿಷ್ಠಿತ ‘ಗುರುಶ್ರೀ’ ಪ್ರಶಸ್ತಿಯನ್ನು ನನಗೆ ನೀಡಿರುವದು ನನಗೆ ನಿಜಕ್ಕೂ ಹೆಮ್ಮೆ ಎನಿಸಿದೆ ಎಂದರು.

ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಗದುಗಿನ ಕೆ.ಎಚ್. ಪಾಟೀಲ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ನ ಸಹಾಯಕ ಪ್ರಾಧ್ಯಾಪಕ ಡಾ. ಅರವಿಂದ ಕರಿನಾಗಣ್ಣವರ, ಹುಬ್ಬಳ್ಳಿಯ ನಿವೃತ್ತ ಪ್ರಾಚಾರ್ಯ ಎಸ್.ಬಿ. ಹಿರೇಮಠ, ಬೆಂಗಳೂರಿನ ಶ್ರೀನಿವಾಸ ಸುರೇಬಾನ, ರೋಣ ಆಯುರ್ವೇದ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಐ.ಬಿ. ಕೊಟ್ಟೂರಶೆಟ್ಟಿ ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಬಿ.ಜಿ. ಅಣ್ಣಿಗೇರಿ ಗುರುಗಳ ಪ್ರತಿಭಾ ಪ್ರತಿಷ್ಠಾನದ ಅಧ್ಯಕ್ಷ ಶಿವಕುಮಾರ ಎಚ್.ಪಾಟೀಲ ಸಂದರ್ಭೋಚಿತವಾಗಿ ಮಾತನಾಡಿ, ಪ್ರತಿಷ್ಠಾನದ ಸರ್ವ ಪದಾಧಿಕಾರಿಗಳ, ಗುರುಗಳ ಹಳೆಯ ವಿದ್ಯಾರ್ಥಿಗಳ ಮತ್ತು ದಾನಿಗಳ ಸಹಕಾರದೊಂದಿಗೆ ಪ್ರತಿಷ್ಠಾನ ಉತ್ತಮ ಕಾರ್ಯ ಮಾಡುತ್ತಿದೆ. ನಾನು ನಿಮಿತ್ತ ಮಾತ್ರ ಎಂದರು.

ಆಶ್ರಮದ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಎಸ್.ಜಿ. ಅಣ್ಣಿಗೇರಿ, ಕೃಷ್ಣಾರೆಡ್ಡಿ ಈರಡ್ಡಿ ನಿಧನಕ್ಕೆ ಸಂತಾಪ ಸಲ್ಲಿಸಲಾಯಿತು. ಶಿವಾನಂದ ಕಟ್ಟಿ ಸ್ವಾಗತಿಸಿದರು, ಎಸ್.ಕೆ. ಮುದ್ಲಾಪೂರ ಪ್ರಾಸ್ತಾವಿಕವಾಗಿ ಮಾತನಾಡಿದರು. ಸುಭಾಶಚಂದ್ರ ಬೆಟದೂರ ವರದಿ ವಾಚಿಸಿದರು, ವಿಜಯಲಕ್ಷ್ಮೀ ಅಂಗಡಿ ಲೆಕ್ಕ ಪರಿಶೋಧನಾ ವರದಿ ಮಂಡಿಸಿದರು. ಕಳಕಪ್ಪ ಕುರ್ತಕೋಟಿ ನಿರೂಪಿಸಿದರು. ರವಿ ದಂಡಿನ ವಂದಿಸಿದರು.

ಕಾರ್ಯಕ್ರಮದಲ್ಲಿ ಡಾ. ಶರಣಬಸವ ಚೌಕಿಮಠ, ಡಾ. ಬಸಯ್ಯ ಬೆಳ್ಳೇರಿಮಠ, ಆಂಜನೇಯ ಕಟಗಿ, ಸಿದ್ಧಲಿಂಗನಗೌಡ ಪಾಟೀಲ, ಡಾ. ಬಸವರಾಜ ಚನ್ನಪ್ಪಗೌಡರ, ಎಸ್.ಆರ್. ಪಾಟೀಲ, ಅನಿಲ ಹೊಸಳ್ಳಿಮಠ, ಸಿದ್ಧಲಿಂಗಪ್ಪ ಅರಳಿ, ಮೋಹನ ಪೊಲೀಸ್‌ಪಾಟೀಲ, ಬಸವರಾಜ ಚನ್ನಳ್ಳಿ, ಸಿದ್ಧಣ್ಣ ಕವಲೂರ, ಬಸವರಾಜ ಬಿಂಗಿ, ಗುರುರಾಜ ಅಣ್ಣಿಗೇರಿ, ಮಂಜುಳಾ ತುಂಬರಮಟ್ಟಿ ಮುಂತಾದವರಿದ್ದರು.

ಶಿವಕುಮಾರ ಎಚ್.ಪಾಟೀಲ ಅಧ್ಯಕ್ಷತೆಯಲ್ಲಿ ಬಿ.ಜಿ. ಅಣ್ಣಿಗೇರಿ ಗುರುಗಳ ಪ್ರತಿಭಾ ಪ್ರತಿಷ್ಠಾನ ಉತ್ತಮ ಮತ್ತು ಮಾದರಿ ಕಾರ್ಯ ಮಾಡುತ್ತಿದೆ. ಪ್ರತಿಭಾನ್ವಿತರ ಮನೆ ಬಾಗಿಲಿಗೆ ಹೋಗಿ ಪ್ರತಿಭಾ ಪುರಸ್ಕಾರ, ಪ್ರಮಾಣಪತ್ರ, ಸಿಹಿ ನೀಡಿ ಸನ್ಮಾನಿಸಿ ಲಕ್ಷಾನುಗಟ್ಟಲೆ ಹಣ ನೀಡುತ್ತಿರುವದು ಶಿಕ್ಷಣಕ್ಕೆ, ಗುರುವಿಗೆ ಸಲ್ಲಿಸುತ್ತಿರುವ ಗೌರವವಾಗಿದ್ದು, ಟ್ರಸ್ಟ್ ಎಲ್ಲ ಪದಾಧಿಕಾರಿಗಳ ಕಾರ್ಯ ಅಭಿನಂದನೀಯ ಎಂದು ಜ. ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ಮೆಚ್ಚುಗೆ ವ್ಯಕ್ತಪಡಿಸಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!