ಚಿತ್ರದುರ್ಗ:- ಇತ್ತೀಚೆಗೆ ಪೋಕ್ಸೋ ಕೇಸ್ ಖುಲಾಸೆ ಗೊಂಡು ನಿರಾಳರಾಗಿರುವ ಮುರುಘಾಶ್ರೀ ವಿರುದ್ಧ ಇದೀಗ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ.
ಚಿತ್ರದುರ್ಗದಲ್ಲಿ ಮುರುಘಾಶ್ರೀ ಅವರು, ಮಠದ ಆಸ್ತಿಗಳನ್ನು ಕೋರ್ಟ್ ಆದೇಶವನ್ನು ಉಲ್ಲಂಘಿಸಿ ಮಾರಾಟ ಮಾಡಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಮುರುಘಾಶ್ರೀ ಪೋಕ್ಸೊ ಪ್ರಕರಣದ ಆರೋಪಿಯಾಗಿದ್ದಾಗ ಸುಪ್ರಿಂ ಕೋರ್ಟ್ ಮಠದ ಆಡಳಿತದಲ್ಲಿ ಯಾವುದೇ ಹಸ್ತಕ್ಷೇಪ ನಿಷೇಧಿಸಿದ್ದರೂ, 2025 ಅಕ್ಟೋಬರ್ 6ರಂದು 2 ಕೋಟಿ ಮೌಲ್ಯದ ನಾಲ್ಕು ನಿವೇಶನಗಳನ್ನು ಮಂಜುನಾಥ್ ಅವರಿಗೆ ಮಾರಾಟ ಮಾಡಲಾಗಿದೆ ಎಂದು ಭಕ್ತರು ದೂರು ನೀಡಿದ್ದಾರೆ.
ಮಠದ ಆಡಳಿತ ಸಮಿತಿ ಅಧ್ಯಕ್ಷ ಶಿವಯೋಗಿ ಕಳಸದ್ ಈ ದೂರು ಬಂದ ನಂತರ ಕಾನೂನು ತಜ್ಞರಿಂದ ಪರಿಶೀಲನೆ ನಡೆಸಿ, ಅಕ್ರಮ ಮಾರಾಟ ಕಂಡುಬಂದರೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.



