ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ: 20ಕ್ಕೂ ಹೆಚ್ಚು ಶೆಡ್ʼಗಳು ಬೆಂಕಿಗಾಹುತಿ

0
Spread the love

ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ ಘಟನೆ ಇಂದು ನಡೆದಿದೆ. ನಗರದ ವೀರಣ್ಣಪಾಳ್ಯ ಮುಖ್ಯ ರಸ್ತೆಯ ಬಳಿ  ಕೂಲಿ ಕಾರ್ಮಿಕರು ವಾಸವಿದ್ದ 20ಕ್ಕೂ ಹೆಚ್ಚು ಶೆಡ್​ಗಳು ಬೆಂಕಿಗಾಹುತಿ ಆಗಿದೆ.

Advertisement

ಬೆಂಕಿ ಅವಘಡದಿಂದ ಆಟಿಕೆ ಫ್ಯಾಕ್ಟರಿಯ ಕಾರ್ಮಿಕರಿಗಾಗಿ ನಿರ್ಮಿಸಲಾಗಿದ್ದ 50 ಪೈಕಿ 20 ಶೆಡ್​ಗಳು ಬೆಂಕಿಗಾಹುತಿ ಆಗಿವೆ. ಶೆಡ್​​ನಲ್ಲಿದ್ದ ಸಾಮಗ್ರಿಗಳು ಸಂಪೂರ್ಣ ಸುಟ್ಟುಹೋಗಿದ್ದು,

ಅದೃಷ್ಟವಶಾತ್​ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಗೋವಿಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

LEAVE A REPLY

Please enter your comment!
Please enter your name here