ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ ಘಟನೆ ಇಂದು ನಡೆದಿದೆ. ನಗರದ ವೀರಣ್ಣಪಾಳ್ಯ ಮುಖ್ಯ ರಸ್ತೆಯ ಬಳಿ ಕೂಲಿ ಕಾರ್ಮಿಕರು ವಾಸವಿದ್ದ 20ಕ್ಕೂ ಹೆಚ್ಚು ಶೆಡ್ಗಳು ಬೆಂಕಿಗಾಹುತಿ ಆಗಿದೆ.
Advertisement
ಬೆಂಕಿ ಅವಘಡದಿಂದ ಆಟಿಕೆ ಫ್ಯಾಕ್ಟರಿಯ ಕಾರ್ಮಿಕರಿಗಾಗಿ ನಿರ್ಮಿಸಲಾಗಿದ್ದ 50 ಪೈಕಿ 20 ಶೆಡ್ಗಳು ಬೆಂಕಿಗಾಹುತಿ ಆಗಿವೆ. ಶೆಡ್ನಲ್ಲಿದ್ದ ಸಾಮಗ್ರಿಗಳು ಸಂಪೂರ್ಣ ಸುಟ್ಟುಹೋಗಿದ್ದು,
ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಗೋವಿಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.