HomeKarnataka Newsಬೆಲೆ ಏರಿಕೆಯಿಂದ ಕಂಗೆಟ್ಟ ಜನರಿಗೆ ಮತ್ತೊಂದು ಶಾಕ್: ಶೀಘ್ರದಲ್ಲೇ ದುಬಾರಿಯಾಗಲಿದೆ ಸೇಬು ಹಣ್ಣು

ಬೆಲೆ ಏರಿಕೆಯಿಂದ ಕಂಗೆಟ್ಟ ಜನರಿಗೆ ಮತ್ತೊಂದು ಶಾಕ್: ಶೀಘ್ರದಲ್ಲೇ ದುಬಾರಿಯಾಗಲಿದೆ ಸೇಬು ಹಣ್ಣು

For Dai;y Updates Join Our whatsapp Group

ನವದೆಹಲಿ/ಬೆಂಗಳೂರು: ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಜನರಿಗೆ ಮತ್ತೊಂದು ಆಘಾತ ಎದುರಾಗಿದೆ. ಅಕಾಲಿಕ ಮಳೆ ಹಾಗೂ ಹವಾಮಾನ ವೈಪರೀತ್ಯದ ಪರಿಣಾಮ ದೇಶದಲ್ಲಿ ಸೇಬು ಹಣ್ಣಿನ ಉತ್ಪಾದನೆ ಗಣನೀಯವಾಗಿ ಕುಸಿದಿದ್ದು, ಮುಂದಿನ ದಿನಗಳಲ್ಲಿ ಮಾರುಕಟ್ಟೆಯಲ್ಲಿ ಸೇಬಿನ ಬೆಲೆ ಏರಿಕೆಯಾಗುವ ಸಾಧ್ಯತೆ ಇದೆ.

ಹಿಮಾಚಲ ಪ್ರದೇಶದಲ್ಲಿ ಕಳೆದ ವರ್ಷ 6.99 ಲಕ್ಷ ಮೆಟ್ರಿಕ್ ಟನ್ ಸೇಬು ಉತ್ಪಾದನೆಯಾಗಿದ್ದರೆ, ಈ ವರ್ಷ ಅದು ಕೇವಲ 2.63 ಲಕ್ಷ ಮೆಟ್ರಿಕ್ ಟನ್‌ಗೆ ಇಳಿದಿದೆ. ಅಂದರೆ ಉತ್ಪಾದನೆಯಲ್ಲಿ ಭಾರೀ ಕುಸಿತ ದಾಖಲಾಗಿದೆ.

ಸೇಬು ಬೆಳೆ ಪ್ರದೇಶದಲ್ಲೂ ಗಣನೀಯ ಇಳಿಕೆ ಕಂಡುಬಂದಿದೆ. 2025ರಲ್ಲಿ 2.37 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಸೇಬು ಬೆಳೆಯಲಾಗಿದ್ದರೆ, ಈ ವರ್ಷ ಅದು 1.16 ಲಕ್ಷ ಹೆಕ್ಟೇರ್‌ಗೆ ಸೀಮಿತವಾಗಿದೆ.

ಹಿಮಾಚಲ ಪ್ರದೇಶದಲ್ಲಿ ಸುಮಾರು 2.5 ಲಕ್ಷ ಕುಟುಂಬಗಳು ಸೇಬು ಬೆಳೆಯನ್ನು ಅವಲಂಬಿಸಿವೆ. ಆದರೆ ಔಷಧಿ, ರಸಗೊಬ್ಬರ ಸೇರಿದಂತೆ ಕೃಷಿ ವೆಚ್ಚ ಹೆಚ್ಚಳ ಹಾಗೂ ಹವಾಮಾನ ವೈಪರೀತ್ಯದಿಂದಾಗಿ ಅನೇಕ ರೈತರು ಈ ಬಾರಿ ಸೇಬು ಬೆಳೆಯಲು ಹಿಂದೇಟು ಹಾಕಿದ್ದಾರೆ.

ಈ ಎಲ್ಲ ಕಾರಣಗಳಿಂದಾಗಿ ಈ ವರ್ಷ ಸುಮಾರು 4.36 ಲಕ್ಷ ಮೆಟ್ರಿಕ್ ಟನ್ ಸೇಬಿನ ಕೊರತೆ ಉಂಟಾಗುವ ಸಾಧ್ಯತೆ ಇದೆ. ಉತ್ಪಾದನೆ ಕಡಿಮೆಯಾಗಿರುವುದರಿಂದ ಮಾರುಕಟ್ಟೆಯಲ್ಲಿ ಪೂರೈಕೆ ಕುಂಠಿತವಾಗಿ, ಸೇಬಿನ ಬೆಲೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img