ಡ್ರಗ್ ಕೇಸ್ ನಲ್ಲಿ ಸೆಲೆಬ್ರಿಟಿಗಳ ಹೆಸರು ಮೇಲಿಂದ ಮೇಲೆ ಕೇಳಿ ಬರ್ತಿದೆ. ಅದರಲ್ಲೂ ಈಗಾಗಲೇ ಹಲವರ ಡ್ರಗ್ ಕೇಸ್ ನಲ್ಲಿ ಜೈಲಿಗೂ ಹೋಗಿ ಬಂದಿದ್ದಾರೆ. ಕಳೆದ ಮೂರು ನಾಲ್ಕು ದಿನಗಳ ಹಿಂದಷ್ಟೇ ಖ್ಯಾತ ನಟ ಶ್ರೀಕಾಂತ್ ಹಾಗೂ ನಿರ್ಮಾಪಕ ಪ್ರಸಾದ್ ಅವರನ್ನು ಮಾದಕ ವಸ್ತು ಪ್ರಕರಣದಲ್ಲಿ ಬಂಧಿಸಲಾಗಿತ್ತು. ಈ ವೇಳೆ ಕೃಷ್ಣ ಅವರು ತಲೆಮರಿಸಿಕೊಂಡಿದ್ದರು. ಇದೀಗ ಕೃಷ್ಣ ಅವರನ್ನು ಬಂಧಿಸಲಾಗಿದೆ.
ಬಾಲ ಕಲಾವಿದರಾಗಿ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ಕೃಷ್ಣ ಸದ್ಯ ಪೋಷಕ ಪಾತ್ರಗಳಲ್ಲಿ ಕಾಣಿಸಿಕೊಳ್ತಿದ್ದಾರೆ. 2010ರ ಸುಮಾರಿಗೆ ಹೀರೋ ಆಗಿ ತಮಿಳು ಚಿತ್ರರಂಗಕ್ಕೆ ಎಂಟ್ರಿಕೊಟ್ಟ ಕೃಷ್ಣ ಅವರಿಗೆ 2012ರಲ್ಲಿ ರಿಲೀಸ್ ಆದ ‘ಕಳುಗು’ ಚಿತ್ರ ಸಾಕಷ್ಟು ಜನಪ್ರಿಯತೆ ತಂದುಕೊಟ್ಟಿತ್ತು. ನಟನೆಯ ಜೊತೆಗೆ ನಿರ್ಮಾಪಕರಾಗಿಯೂ ಕೃಷ್ಣ ಗುರುತಿಸಿಕೊಂಡಿದ್ದಾರೆ.
ಪ್ರಸಾದ್ ಅವರು ಫಿಲ್ಮ್ ಇಂಡಸ್ಟ್ರಿಗೆ ಡ್ರಗ್ ಹಂಚಿಕೆ ಮಾಡುತ್ತಿದ್ದರು. ಇವರು ಡ್ರಗ್ ಪಾರ್ಟಿಗಳನ್ನು ಆಯೋಜನೆ ಮಾಡುತ್ತಿದ್ದರು ಎನ್ನಲಾಗಿದೆ. ಇದರಲ್ಲಿ ಕೃಷ್ಣ ಭಾಗಿ ಆಗಿದ್ದರು ಎನ್ನಲಾಗಿದೆ. ಸದ್ಯ ಕೃಷ್ಣ ಅವರನ್ನು ನುಂಗಂಬಾಕಂ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸಲಾಗುತ್ತಿದೆ.