ಬೆಂಗಳೂರು: ಮುಡಾ ಹಗರಣದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಅರ್ಕಾವತಿ ಬಡಾವಣೆಯ ನಿವೇಶನ ಹಂಚಿಕೆಯಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ನಿವೇಶನದಾರರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಬಿಡಿಎ ಅಧಿಕಾರಿಗಳ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದಾರೆ.
Advertisement
ನಿವೇಶನದ ಮಾಲೀಕರಾದ ಎಂ.ಎಸ್.ಶಿವಲಿಂಗಪ್ಪ, ಎಂ.ಚಂದ್ರಶೇಖರನ್, ಕೆ.ರಾಮಚಂದ್ರಯ್ಯ ಮತ್ತು ಡಾ.ವೆಂಕಟಕೃಷ್ಣಪ್ಪ ಅವರು ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಅರ್ಕಾವತಿ ಲೇಔಟ್ನಲ್ಲಿ ಹಂಚಿಕೆಯಾಗಿದ್ದ ನಿವೇಶನ ಭೂಗಳ್ಳರ ಪಾಲಾಗುತ್ತಿದೆ. ಅಧಿಕಾರ ದುರ್ಬಳಕೆಯಿಂದ ನಿವೇಶನದಾರರಿಗೆ ತೊಂದರೆಯಾಗುತ್ತಿದೆ” ಎಂದು ರಾಜ್ಯಪಾಲರಿಗೆ ದೂರು ನೀಡಿದ್ದಾರೆ.