ದರ್ಶನ್ ಗೆ ಮತ್ತೊಂದು ಸಂಕಷ್ಟ: ನಟನ ವಿರುದ್ಧ ದಾಖಲಾಯ್ತು ಮತ್ತೊಂದು FIR!

0
Spread the love

ಬೆಂಗಳೂರು:- ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ನಟ ದರ್ಶನ್ ವಿರುದ್ಧ ಮತ್ತೊಂದು FIR ದಾಖಲಾಗಿದೆ.

Advertisement

ನಟ ದರ್ಶನ್ ವಿರುದ್ಧ ಬೆದರಿಕೆ ಆರೋಪ ಕೇಳಿ ಬಂದಿದ್ದು, ಈ ಸಂಬಂಧ ಎನ್ ಸಿಆರ್ ದಾಖಲಾಗಿದೆ.

ನಿರ್ಮಾಪಕ ಭರತ್ ಗೆ ಬೆದರಿಕೆ ಹಾಕಿದ್ದ ಆರೋಪ ದರ್ಶನ್ ವಿರುದ್ಧ ಕೇಳಿ ಬಂದಿದೆ. ಈ ಹಿನ್ನೆಲೆ, ದರ್ಶನ್ ಮತ್ತು ಮ್ಯಾನೇಜರ್ ವಿರುದ್ಧ ಎನ್ ಸಿಆರ್ ದಾಖಲಾಗಿದೆ. ಅಕ್ಟೋಬರ್ 18ರಂದು ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಎನ್ ಸಿಆರ್ ದಾಖಲಾಗಿದೆ.

ಭಗವಾನ್ ಶ್ರೀ ಕೃಷ್ಣ ಚಿತ್ರದ ನಿರ್ಮಾಪಕ ಭರತ್ ಅವರು ಈ ಹಿಂದೆಯೇ ದೂರು ನೀಡಿದ್ದರು.2022 ರಲ್ಲಿ ಚಿತ್ರದ ನಾಯಕ ದೃವನ್ ವಿರುದ್ಧ ದೂರು ದಾಖಲಾಗಿದೆ. ನಟ ದರ್ಶನ್ ಕೈಯಲ್ಲಿ ಪೋನ್ ಮೂಲಕ ಬೆದರಿಕೆ ಹಾಕಿಸಿದ ಆರೋಪ‌ವೂ ಕೇಳಿ ಬಂದಿದೆ.

ದೂರು ಸ್ವೀಕರಿಸಿ ಪೊಲೀಸರು ಸುಮ್ಮನಾಗಿದ್ದರು. ಹೀಗಾಗಿ ಬೆದರಿಕೆ ಆರೋಪದಲ್ಲಿ ಭರತ್ ಮತ್ತೆ ನಿನ್ನೆ ದೂರು ನೀಡಿದ್ದಾರೆ. ಹೀಗಾಗಿ ನಟ ದರ್ಶನ್ ಹಾಗೂ ಮ್ಯಾನೇಜರ್ ನಾಗರಾಜ್ ವಿರುದ್ದ ಮತ್ತೆ ಎನ್ ಸಿಆರ್ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here