Accident: ಬಿಬಿಎಂಪಿ ಕಿಲ್ಲರ್ ಕಸದ ಲಾರಿಗೆ ಮತ್ತೊಂದು ಬಲಿ..! ಲಾರಿಗೆ ಬೆಂಕಿ ಹಚ್ಚಿದ ಸ್ಥಳೀಯರು!

0
Spread the love

ಬೆಂಗಳೂರು: ಬೆಂಗಳೂರಲ್ಲಿ ಬಿಬಿಎಂಪಿ ಕಸದ ಲಾರಿ ಮತ್ತೊಂದು ಬಲಿ ಪಡೆದಿದೆ. ಯಮಸ್ವರೂಪಿ ಲಾರಿ ಹರಿದ ಪರಿಣಾಮ ಬೈಕ್‌ ಸವಾರನೊಬ್ಬ ಬಲಿಯಾಗಿರುವ ಘಟನೆ ಬೆಂಗಳೂರಿನ ಥಣಿಸಂಧ್ರ ರೈಲ್ವೆ ಟ್ರ‍್ಯಾಕ್ ಬಳಿ ನಡೆದಿದೆ. ಬೈಕ್‌ ಸವಾರನಿಗೆ ಕಸದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

Advertisement

ದೃಶ್ಯಕಂಡು ರೊಚ್ಚಿಗೆದ್ದ ಸ್ಥಳೀಯರು ಕಸದ ಲಾರಿಗೆ ಬೆಂಕಿ ಹೆಚ್ಚಿ ಆಕ್ರೋಶ ಹೊರಹಾಕಿದ್ದಾರೆ. ಬಿಬಿಎಂಪಿ ಕಸದ ಲಾರಿಗೆ ಥಣಿಸಂದ್ರದಲ್ಲಿ ಇದು 4ನೇ ಬಲಿಯಾಗಿದೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಯಲಹಂಕ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆಯಲ್ಲಿ ಯಾರದ್ದು ತಪ್ಪು? ಎಂಬುದರ ಬಗ್ಗೆಯೂ ಮಾಹಿತಿ ಕಲೆಹಾಕುತ್ತಿದ್ದಾರೆ.

 


Spread the love

LEAVE A REPLY

Please enter your comment!
Please enter your name here