ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಾಲಕ್ಕೆ ಮತ್ತೊಂದು ಬಲಿ!

0
Spread the love

ಮಂಡ್ಯ: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಾಲಕ್ಕೆ ಮತ್ತೊಂದು ಬಲಿಯಾಗಿರುವ ಘಟನೆ ನಡೆದಿದೆ. ಮೈಕ್ರೋ ಫೈನಾನ್ಸ್ ಹಾಗೂ ಸಾಲಗಾರರ ಕಾಟಕ್ಕೆ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದು, ಮಂಡ್ಯದ ಕೆ.ಆರ್.ಪೇಟೆ ತಾಲ್ಲೂಕು ವಳೆಗೆರ ಮೆಣಸ ಗ್ರಾಮದಲ್ಲಿ ಘಟನೆ ನಡೆದಿದೆ.

Advertisement

ಒಳಗೆರೆಮೆಣಸ ಗ್ರಾಮದ ಲೋಹಿತ್ @ ನವೀನ್  (35) ಮೃತ ದುರ್ದೈವಿಯಾಗಿದ್ದು, ಈತ ವಿವಿಧ ಮೈಕ್ರೋ ಫೈನಾನ್ಸ್ ಖಾಸಗಿ ವ್ಯಕ್ತಿಗಳಿಂದಲೂ ಸಾಲ ಪಡೆದಿದ್ದನು. ಕಳೆದ ವಾರ ಸಾಲಗಾರರ ಕಾಟಕ್ಕೆ ಬೇಸತ್ತು K.R.ಪೇಟೆ ಪಟ್ಟಣ ಪೊಲೀಸ್ ಠಾಣೆಗೆ ದೂರು ಕೂಡ ಸಲ್ಲಿಕೆ ಮಾಡಿದ್ದನು.

ಅಲ್ಲಿಂದಲೂ ರಕ್ಷಣೆ ಸಿಗದಕ್ಕೆ ಮೈಕ್ರೋ ಫೈನಾನ್ಸ್ ಹಾಗೂ  ಸಾಲಗಾರರ ಕಾಟಕ್ಕೆ ಬೇಸತ್ತು ಇಂದು ಮುಂಜಾನೆ ಮನೆಯಲ್ಲೇ  ಆತ್ಮಹತ್ಯೆಗೆ ಶರಣಾಗಿದ್ದಾನೆ. ಕೆ.ಆರ್.ಪೇಟೆ ಟೌನ್  ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.


Spread the love

LEAVE A REPLY

Please enter your comment!
Please enter your name here