ಕಲಬುರಗಿ: ಶಿರೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಗುಡ್ಡ ಕುಸಿತ ಪ್ರಕರಣದ ಬೆನ್ನಲ್ಲೇ ಕಲಬುರಗಿ ಜಿಲ್ಲೆಯ ಸೇಡಂ ಪಟ್ಟಣದಲ್ಲಿರುವ ಶ್ರೀ ಸಿಮೆಂಟ್ ಫ್ಯಾಕ್ಟರಿಯಲ್ಲಿ ಇಂದು ಮತ್ತೊರ್ವ ಕಾರ್ಮಿಕ ಸಾವನ್ನಪ್ಪಿದ್ದಾನೆ.
ಸರಿಯಾದ ಸುರಕ್ಷತಾ ಕ್ರಮ ಕೈಗೊಳ್ಳದ ಪರಿಣಾಮ ಜಾರ್ಖಂಡ್ ಮೂಲದ ಯುವಕ ರಾಜಕುಮಾರ(26) ಬಲಿಯಾಗಿದ್ದಾನೆ. ಇನ್ನು ಇದೇ ಫ್ಯಾಕ್ಟರಿಯಲ್ಲಿ ಕೆಲ ದಿನಗಳ ಹಿಂದಷ್ಟೆ ಬೆನಕನಹಳ್ಳಿ ನಿವಾಸಿ ಇಂದ್ರಕುಮಾರ ಮೃತಪಟ್ಟಿದ್ದ. ಈಗ ಮತ್ತೋರ್ವನ ಬಲಿಯಾಗಿದ್ದಾನೆ.



