ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಕೇಂದ್ರ ಕಛೇರಿ ಹುಬ್ಬಳ್ಳಿಯಲ್ಲಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಪ್ರಿಯಾಂಗಾ ಎಂ ಅವರು ಶಿವಶರಣ ಹಡಪದ ಅಪ್ಪಣ್ಣರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಜಯಂತಿ ಆಚರಣೆಗೆ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಪಿ.ಆರ್. ಕಿರಣಗಿ ಮಾತನಾಡಿ, ಶಿವಶರಣ ಶ್ರೀ ಹಡಪದ ಅಪ್ಪಣ್ಣನವರು 12ನೇ ಶತಮಾನದ ವಚನ ಚಳುವಳಿ ಮತ್ತು ಸಾಮಾಜಿಕ ಕ್ರಾಂತಿಯ ಹರಿಕಾರರಲ್ಲಿ ಒಬ್ಬರು. ಇವರು ಬಸವಣ್ಣನವರ ಆಪ್ತವಲಯದಲ್ಲಿ ಗುರುತಿಸಲ್ಪಟ್ಟಿದ್ದರು. ಸಮಾಜದಲ್ಲಿರುವ ಮೇಲು, ಕೀಳು, ಮೂಢನಂಬಿಕೆ ಅಂಧ ಆಚರಣೆಗಳನ್ನು ಹೋಗಲಾಡಿಸಲು ಬಸವಣ್ಣನವರ ನೇತೃತ್ವದಲ್ಲಿ ಶ್ರಮಿಸಿದ್ದಾರೆ, ಅವರ ವ್ಯಕ್ತಿತ್ವವನ್ನು ಇಂದು ರೂಢಿಸಿಕೊಳ್ಳುವ ಅವಶ್ಯಕತೆ ಇದೆ ಎಂದು ನುಡಿದರು.
ಕಾರ್ಯಕ್ರಮದಲ್ಲಿ ವಿವೇಕಾನಂದ ವಿಶ್ವಜ್ಞ, ಪಿ.ವೈ. ನಾಯಕ್, ಸಿದ್ದೇಶ್ವರ ಹೆಬ್ಬಾಳ, ಗಣೇಶ ರಾಠೋಡ್, ಶಶೀಧರ ಕುಂಬಾರ, ಜಗದಂಬಾ ಕೋಪರ್ಡೆ, ಶ್ರೀನಾಥ ಜಿ, ಅಧಿಕಾರಿಗಳಾದ ಎಂ.ಬಿ. ಕಪಲಿ, ನವೀನಕುಮಾರ ತಿಪ್ಪಾ, ದಯಾನಂದ ಪಾಟೀಲ, ಆರ್.ಎಲ್. ಭಜಂತ್ರಿ, ಕೇಂದ್ರ ಕಛೇರಿಯ ಅಧಿಕಾರಿ/ಸಿಬ್ಬಂದಿಗಳು ಉಪಸ್ಥಿತರಿದ್ದರು. ವಿರೂಪಾಕ್ಷ ಕಟ್ಟಿಮನಿ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.