ವಿಜಯಸಾಕ್ಷಿ ಸುದ್ದಿ, ಗದಗ: ಬಿಜೆಪಿ ಮುಖಂಡ ಬಸನಗೌಡ ಪಾಟೀಲ ಯತ್ನಾಳರನ್ನು ಬಂಧಿಸುವಂತೆ ಅಖಿಲ ಕರ್ನಾಟಕ ಮುಸ್ಲಿಂ ಮಹಾಸಭಾ ರಾಜ್ಯಾಧ್ಯಕ್ಷ ಮಹ್ಮದಶಫಿ ಎಸ್.ನಾಗರಕಟ್ಟಿ ಆದೇಶದ ಮೇರೆಗೆ ಅಖಿಲ ಕರ್ನಾಟಕ ಮುಸ್ಲಿಂ ಮಹಾಸಭಾ ಗದಗ ಜಿಲ್ಲಾ ಯುವ ಘಟಕದ ಅಧ್ಯಕ್ಷ ಯಾಸೀನ್ ಅ.ಮುಲ್ಲಾ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಿದರು.
ಪ್ರವಾದಿಗಳು ಮತ್ತು ಅಲ್ಪಸಂಖ್ಯಾತ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡುತ್ತಿರುವ ಬಸನಗೌಡ ಪಾಟೀಲ್ ಯತ್ನಾಳ್ ಕಳೆದ ಹಲವಾರು ತಿಂಗಳುಗಳಿಂದ ಅಲ್ಪಸಂಖ್ಯಾತ ಸಮುದಾಯದ ಮೇಲೆ ಸತತವಾಗಿ ಅವಹೇಳನಕಾರಿ ಮಾತುಗಳನ್ನಾಡುತ್ತಿದ್ದಾರೆ. ಬಸವನಗೌಡ ಪಾಟೀಲ ಯತ್ನಾಳರು ಕೋಮು ಸೌಹಾರ್ದತೆಗೆ ಹೆಸರಾದ ಕರ್ನಾಟಕ ರಾಜ್ಯದಲ್ಲಿ ಕೋಮುಗಲಭೆ ಸೃಷ್ಟಿಸಲು ಜಾತಿ-ಜಾತಿಗಳ ನಡುವೆ ಸಂಘರ್ಷವನ್ನುಂಟು ಮಾಡುವಂತಹ ಹೇಳಿಕೆಗಳನ್ನು ನೀಡುತ್ತಿರುವುದರಿಂದ ತಕ್ಷಣ ಇವರನ್ನು ಕೇಂದ್ರ ಸರ್ಕಾರ ಬಂಧಿಸಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಉಪಾಧ್ಯಕ್ಷ ಅಫ್ಜಲ್ ಮನಿಯಾರ, ಸೋಹೆಲ್ ಹಣಗಿ, ಯಾಸೀನ್ ಖವಾಸ, ರಶೀದ ಖವಾಸ, ಶಬ್ಬೀರ ಕುನ್ನಿಬಾವಿ ಮುಂತಾದವರು ಉಪಸ್ಥಿತರಿದ್ದರು.