ಇಂದಿರಾ ಕ್ಯಾಂಟೀನ್ ಸ್ಥಳಾಂತರಕ್ಕೆ ಮನವಿ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಶ್ರೀ ಗಾನಯೋಗಿ ಪಂಡಿತ್ ಪುಟ್ಟರಾಜ ಗವಾಯಿಗಳವರ ಬಸ್ ನಿಲ್ದಾಣದಲ್ಲಿ ನಿರ್ಮಾಣವಾಗುತ್ತಿರುವ ಇಂದಿರಾ ಕ್ಯಾಂಟೀನ್ ಬೇರೆ ಕಡೆ ಸ್ಥಳಾಂತರಿಸಬೇಕು ಎಂದು ಬೀದಿಬದಿ ಎಗ್‌ರೈಸ್, ಇಡ್ಲಿ-ವಡಾ, ಪಲಾವ್, ಹೋಟೆಲ್ ವ್ಯಾಪಾರಸ್ಥರಿಂದ ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳಿಗೆ ಹಾಗೂ ಗದಗ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

Advertisement

ಈ ಸಂದರ್ಭದಲ್ಲಿ ವ್ಯಾಪಾರಸ್ಥರು ಮಾತನಾಡಿ, ಇಂದಿರಾ ಕ್ಯಾಂಟೀನ್ ಮಾಡುವುದಕ್ಕೆ ನಮ್ಮ ವಿರೋಧವಿಲ್ಲ. ಆದರೆ ಬಸ್ ನಿಲ್ದಾಣದಲ್ಲಿ ಬೇಡ. ಈಗ ಸಣ್ಣ-ಪುಟ್ಟ ವ್ಯಾಪಾರಸ್ಥರು ಬಸ್ ನಿಲ್ದಾಣಕ್ಕೆ ಬಂದು-ಹೋಗುವ ಪ್ರಯಾಣಿಕರನ್ನು ನಂಬಿ ವ್ಯಾಪಾರ ನಡೆಸುತ್ತಿದ್ದೇವೆ. ಆದರೆ ಈಗ ಇಂದಿರಾ ಕ್ಯಾಂಟೀನ್ ಆಗುವುದರಿಂದ ನಮ್ಮ ವ್ಯಾಪಾರ ಸಂಪೂರ್ಣ ಸ್ಥಗಿತಗೊಳ್ಳುತ್ತದೆ. ಆದ ಕಾರಣ ಇಂದಿರಾ ಕ್ಯಾಂಟೀನ್ ಗದಗ ಜಿಲ್ಲಾ ಆಸ್ಪತ್ರೆ ಕಡೆ ಸ್ಥಳಾಂತರಿಸಬೇಕು ಎಂದು ಮನವಿ ಮಾಡಿದರು.


Spread the love

LEAVE A REPLY

Please enter your comment!
Please enter your name here