ವಿಜಯಸಾಕ್ಷಿ ಸುದ್ದಿ, ಗದಗ: ನಗರದಲ್ಲಿ ಪಡಿತರ ಅಕ್ಕಿ ಅಕ್ರಮ ಸಂಗ್ರಹ ಮತ್ತು ಮಾರಾಟ ತಡೆಗಟ್ಟುವ ಕುರಿತು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ವತಿಯಿಂದ ತಹಸೀಲ್ದಾರರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಕರವೇ ಸ್ವಾಭಿಮಾನಿ ಸೇನೆಯ ತಾಲೂಕಾಧ್ಯಕ್ಷ ಇಸ್ಮಾಯಿಲ್ ಉಮಚಗಿ ಮಾತನಾಡಿ, ಅಕ್ರಮ ಪಡಿತರ ಅಕ್ಕಿ ಸಂಗ್ರಹ ಹಾಗೂ ಸಾಗಾಟ ನಿರಂತರ ನಡೆಯುತ್ತಿದ್ದು, ಅವಳಿ ನಗರದಲ್ಲಿ ಕಾಳಸಂತೆಯಲ್ಲಿ ಹೆಚ್ಚಿನ ದರಕ್ಕೆ ಮಾರಾಟವಾಗುತ್ತಿದೆ. ಅಕ್ರಮ ಅಕ್ಕಿ ಸಾಗಾಟ ತಡೆಯಬೇಕಾದ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಕಣ್ಣುಮುಚ್ಚಿ ಕುಳಿತಿದ್ದಾರೆ ಮತ್ತು ಅಕ್ರಮ ಪಡಿತರ ಅಕ್ಕಿ ಸಾಗಾಟಗಾರ ಜೊತೆಗೆ ಕೈಜೋಡಿಸಿದ್ದಾರೆ.
ಈ ಅಕ್ರಮ ಪಡಿತರ ಅಕ್ಕಿ ಸಂಗ್ರಹ ಹಾಗೂ ಸಾಗಾಟಕ್ಕೆ ಕಡಿವಾಣ ಹಾಕಿ ತಪ್ಪಿತಸ್ಥರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಬಡವರ ಹೊಟ್ಟೆ ತುಂಬಿಸುವ ಯೋಜನೆಯ ಉದ್ದೇಶ ಸಾಕಾರವಾಗಬೇಕು ಎಂದರು.
ಈ ಸಂದರ್ಭದಲ್ಲಿ ಖಾಜಾಸಾಬ ಕೊಪ್ಪಳ, ಅಸ್ಲಮ್ ಮಾಲದಾರ, ಸಾಧಿಕ ಚಿತವಾಡಗಿ, ಅನ್ವರ ಕೊಪ್ಪಳ, ಸಲೀಂ ಶಹಪೂರ, ಫಾರುಕ ದಂಡಿನ, ಸತೀಶ ರೋಣ, ಹೈದರಲಿ ಸವಣೂರ, ಮಹಮ್ಮದ ಅಲಿ, ಶಬೀರ ದ್ಯಾಪೂರ, ಹಮಾಯತ್, ಆಸಿಫ್ ಮಾಲದಾರ, ನೌವೀದ ಕಂಪ್ಲಿ, ರಸೂಲ ಬೇಪಾರಿ ಸೋಯಲ್ ಸೇರಿದಂತೆ ಕಾರ್ಯಕರ್ತರು ಉಪಸ್ಥಿತರಿದ್ದರು.