ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ : ಶಿರಹಟ್ಟಿಯಲ್ಲಿ ಶ್ರೀರಾಮ ಸೇನೆಯ ತಾಲೂಕಾ ಘಟಕದ ವತಿಯಿಂದ ರಾಜ್ಯದಲ್ಲಿ ಸಾಲು ಸಾಲು ಹಿಂದೂಗಳ ಮೇಲೆ ಬರ್ಬರ ಕೊಲೆ, ದಾಳಿ ಖಂಡಿಸಿ ಕುಸಿದು ಬಿದ್ದ ಕಾನೂನು ಸುವ್ಯವಸ್ಥೆಯನ್ನು ಖಂಡಿಸಿ, ರಾಜ್ಯದಲ್ಲಿ ರಾಷ್ಟçಪತಿ ಆಡಳಿತಕ್ಕೆ ಆಗ್ರಹಿಸಿ ತಹಸೀಲ್ದಾರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ತಾಲೂಕಾಧ್ಯಕ್ಷ ವಾಸುದೇವ ಜಾಧವ, ಹುಬ್ಬಳ್ಳಿಯಲ್ಲಿ ಬಿವಿಬಿ ವಿದ್ಯಾರ್ಥಿನಿ ನೇಹಾ ಹಿರೇಮಠ ಹಾಡುಹಗಲೇ ಫಯಾಜ್ನಿಂದ ಬರ್ಬರ ಹತ್ಯೆ, ದಾವಣಗೆರೆ ಜಿಲ್ಲೆ ನಲ್ಲೂರಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಮುಸ್ಲಿಂರಿಂದ 3 ಹಿಂದೂಗಳ ಮೇಲೆ ಮಾರಣಾಂತಿಕ ಹಲ್ಲೆ, ಚಿತ್ರದುರ್ಗದಲ್ಲಿ ಸಹ ಉದ್ಯೋಗಿ ಹಿಂದೂ ಯುವಕ ಮುಸ್ಲಿಂ ಯುವತಿಗೆ ಡ್ರಾಪ್ ಕೊಟ್ಟಿದ್ದಕ್ಕೆ ಮುಸ್ಲಿಂ ಗೂಂಡಾಗಳಿಂದ ಹಿಗ್ಗಾಮುಗ್ಗಾ ಥಳಿತ, ಬೆಂಗಳೂರು ವಿದ್ಯಾರಣ್ಯಪುರದಲ್ಲಿ ಜೈಶ್ರೀರಾಮ ಘೋಷಣೆ ಕೂಗಿದ ಹಿಂದೂಗಳ ಮೇಲೆ ಮುಸ್ಲಿಂರಿಂದ ಆಕ್ರಮಣ, ಮೈಸೂರು, ಮತ್ತು ಬಾಗಲಕೋಟಿಯಲ್ಲೂ ಸಹ ಮುಸ್ಲಿಂರಿಂದ ದಾಳಿ ನಡೆಯುತ್ತಿದೆ. ಕೂಡಲೇ ಇಂತಹ ಕೃತ್ಯಗಳಿಗೆ ಕಡಿವಾಣ ಹಾಕುವಂತೆ ಮನವಿ ಸಲ್ಲಿಸಿದರು.
ಪವನ ಕುರಿ, ಸಂತೋಷ ಪರಬತ, ಮಾರುತಿ ಹಾದಿಮನಿ, ಜಗದೀಶ ಸಿಂಧೆ, ಪ್ರದೀಪ ಕಟ್ಟೇಕಾರ, ಬಸವರಾಜ ಹದ್ಲಿ ಮುಂತಾದವರು ಉಪಸ್ಥಿತರಿದ್ದರು.