ವಿಜಯಸಾಕ್ಷಿ ಸುದ್ದಿ, ಗದಗ : ವಾರ್ಡ್ ನಂ. 16ರ ಹೊಂಬಳನಾಕಾ ಜನತಾ ಕಾಲೋನಿಯ ಸಾರ್ವಜನಿಕರು ಮಳೆಗಾಲದಲ್ಲಿ ಪರದಾಡುವಂತಾಗಿದೆ. ಸರಿಯಾಗಿ ಮಳೆ ನೀರು ಹೊಗಲು ಅನಕೂಲವಿಲ್ಲದೆ ಅಧ್ವಾನ ಸೃಷ್ಟಿಯಾಗುತ್ತಿದೆ ಎಂದು ಹೊಂಬಳ ನಾಕಾ ಜನತಾ ಕಾಲೋನಿ ಅಭಿವೃದ್ಧಿಪರ ಸೇವಾ ಸಂಘದ ಅಧ್ಯಕ್ಷ ಕೃಷ್ಣಾ ಎಚ್. ಹಡಪದ ಆರೋಪಿಸಿದ್ದಾರೆ.
ಅವರು ಈ ಕುರಿತು ಪ್ರಕಟಣೆ ನೀಡಿ, ಮಳೆ ನೀರು ರಾಜಕಾಲುವೆಯಲ್ಲಿ ಹರಿದು ಹೊಗುವ ಬದಲು ಕಾಲೋನಿಯಲ್ಲಿನ ಮನೆಗೂ ನುಗ್ಗುತ್ತಿದೆ. ಈ ಬಗ್ಗೆ ನಗರಸಭೆ ಅಥವಾ ಜಿಲ್ಲಾಡಳಿತ ಯಾವುದೇ ರೀತಿಯ ಮುಂಜಾಗ್ರತಾ ಕ್ರಮ ವಹಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಚಿವರಾದ ಎಚ್.ಕೆ. ಪಾಟೀಲರು ಇತ್ತ ಗಮನಿಸಿ ಎಲ್ಲ ರೀತಿಯ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡುವದರೊಂದಿಗೆ ಈ ಭಾಗದ ನೊಂದ ಬಡ ಜನತೆಗೆ ನೆಮ್ಮದಿಯಿಂದ ಬದುಕಲು ಅನಕೂಲತೆ ಕಲ್ಪಿಸಿಕೊಡಬೇಕೆಂದು ಒತ್ತಾಯಿಸಿದ್ದಾರೆ.



