HomeGadag Newsಸರ್ವಜ್ಞರ ವಿಚಾರಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಿ

ಸರ್ವಜ್ಞರ ವಿಚಾರಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಿ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ಸಂತ ಕವಿ ಸರ್ವಜ್ಞರ ವಿಚಾರಧಾರೆಗಳನ್ನು ಪ್ರತಿಯೊಬ್ಬರೂ ಬದುಕಿನಲ್ಲಿ ಅಳವಡಿಸಿಕೊಂಡು ಸಮಾಜ ಸುಧಾರಣೆಗೆ ಶ್ರಮಿಸಬೇಕೆಂದು ಅಪರ ಜಿಲ್ಲಾಧಿಕಾರಿ ದುರಗೇಶ್ ಕೆ.ಆರ್ ಹೇಳಿದರು.

ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಜಿಲ್ಲಾಡಳಿತ ಭವನದ ಅಡಿಟೋರಿಯಂ ಹಾಲ್‌ನಲ್ಲಿ ಶುಕ್ರವಾರ ಜರುಗಿದ ಸಂತ ಕವಿ ಸರ್ವಜ್ಞ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪ್ರತಿಯೊಬ್ಬರೂ ಕವಿ ಸರ್ವಜ್ಞರ ವಚನಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸಮಾಜದಲ್ಲಿ ಅವರ ಆದರ್ಶಗಳನ್ನು ಪಾಲಿಸಬೇಕು. ಈಗಿನ ಮಕ್ಕಳಿಗೆ ಸರ್ವಜ್ಞರ ವಚನಗಳು, ಸಂಸ್ಕೃತಿ ಮತ್ತು ಮೌಲ್ಯಗಳ ಬಗ್ಗೆ ಅರಿವು ಮೂಡಿಸುವ ಕೆಲಸವಾಗಬೇಕು. ಸರ್ವಜ್ಞರು ತಮ್ಮ ವಚನಗಳ ಮೂಲಕ ಸಮಾಜದಲ್ಲಿನ ಅಂಕು-ಡೊಂಕು, ಮೂಢನಂಬಿಕೆಗಳನ್ನು ಹೋಗಲಾಡಿಸಿ ಲೋಕಕಲ್ಯಾಣಕ್ಕೆ ಶ್ರಮಿಸಿದ್ದಾರೆ. ಪಾಲಕರು ತಮ್ಮ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಸಮಾಜದಲ್ಲಿ ಉನ್ನತ ಸ್ಥಾನ ಪಡೆಯಲು ಶ್ರಮಿಸಬೇಕು ಎಂದರು.

ಶಿವಾನಂದ ಚಕ್ರಸಾಲಿ ಉಪನ್ಯಾಸ ನೀಡಿ, ಸರ್ವಜ್ಞನ ವಿಚಾರಗಳು ಇಂದಿಗೂ ಪ್ರಸ್ತುತ. ಸಮಾಜದಲ್ಲಿನ ಜಾತಿ ಪದ್ಧತಿ, ಧಾರ್ಮಿಕ ಅಸಹಿಷ್ಣುತೆ, ಮತ್ತು ಮೌಲ್ಯಗಳ ಕುಸಿತವನ್ನು ಸರಿಪಡಿಸಲು ಸರ್ವಜ್ಞನ ತ್ರಿಪದಿಗಳು ದಿಕ್ಸೂಚಿಯಂತೆ ಇಂದಿಗೂ ಕೆಲಸ ಮಾಡುತ್ತವೆ. ನಮ್ಮ ಶಿಕ್ಷಣ ವ್ಯವಸ್ಥೆ ಕೇವಲ ಪುಸ್ತಕದ ಜ್ಞಾನ ನೀಡುತ್ತಿದೆ. ಆದರೆ ಸರ್ವಜ್ಞ ಹೇಳಿದ ಅನುಭವದ ಶಿಕ್ಷಣ ನಮಗೆ ಬೇಕಾಗಿದೆ. `ಮಾತು ಬಲ್ಲವನಿಗೆ ಜಗಳವಿಲ್ಲ, ಊಟ ಬಲ್ಲವನಿಗೆ ರೋಗವಿಲ್ಲ’ ಎಂಬ ಅವರ ಮಾತು ಇಂದಿನ ಒತ್ತಡದ ಬದುಕಿಗೆ ಮತ್ತು ಆರೋಗ್ಯಕ್ಕೆ ಸಂಜೀವಿನಿಯಂತಿದೆ ಎಂದರು.

ಇದೇ ಸಂದರ್ಭದಲ್ಲಿ ಎಸ್.ಎಸ್.ಎಲ್.ಸಿ, ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಮುದಾಯದ ಸಾಧಕರಿಗೆ ಗೌರವಿಸಿ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ್ ಬಬರ್ಚಿ, ವಿ.ಆರ್. ಕುಂಬಾರ, ಮುರಿಗೆಪ್ಪ ಕೇರಿ, ಯಲ್ಲಪ್ಪ ಕುಂಬಾರ, ನಿಂಗಪ್ಪ ಕುಂಬಾರ, ಶರಣಮ್ಮ, ಈಶ್ವರಪ್ಪ ಕುಂಬಾರ, ಸಮಾಜದ ಮುಖಂಡರು, ಗಣ್ಯರು, ಮಹಿಳೆಯರು, ಸಾರ್ವಜನಿಕರು ಉಪಸ್ಥಿತರಿದ್ದರು. ವೀರಣ್ಣ ಅಂಗಡಿ ಹಾಗೂ ಸಂಗಡಿಗರು ನಾಡಗೀತೆ ಪ್ರಸ್ತುತಪಡಿಸಿದರು.

ಸಂಪನ್ಮೂಲ ವ್ಯಕ್ತಿಗಳಾದ ಶಿವಾನಂದ ಚಕ್ರಸಾಲಿ ಮಾತನಾಡಿ, ಸಂತ ಕವಿ ಸರ್ವಜ್ಞ ಸುಮಾರು 16ನೇ ಶತಮಾನದಲ್ಲಿ ಜನಿಸಿದವರು. ಹಾವೇರಿ ಜಿಲ್ಲೆಯ ಹೀರೆಕೆರೂರು ತಾಲೂಕಿನ ಅಬಲೂರು ಗ್ರಾಮದವರು. ತಂದೆ ಬಸವರಸ ಮತ್ತು ತಾಯಿ ಮಾಳೆಯ ಪುತ್ರನಾಗಿ ಜನಿಸಿದ ಇವರ ಮೂಲ ಹೆಸರು ಪುಷ್ಪದತ್ತ. ಲೋಕಸಂಚಾರ ಮಾಡುತ್ತಾ, ತಮ್ಮ ಅನುಭವದೊಂದಿಗೆ ಬೆಂದು, ಜ್ಞಾನವನ್ನೇ ಉಸಿರಾಗಿಸಿಕೊಂಡು ಅವರು ‘ಸರ್ವಜ್ಞ’ರಾಗಿ ರೂಪುಗೊಂಡರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!