ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕ ರಕ್ಷಣಾ ವೇದಿಕೆಯ ಮಹಿಳಾ ಘಟಕದ ಗದಗ ಜಿಲ್ಲಾ ಉಪಾಧ್ಯಕ್ಷರನ್ನಾಗಿ ರಾಜೇಶ್ವರಿ ಶಿ. ಹೊಸತೋಟದ ಇವರನ್ನು ನೇಮಕ ಮಾಡಿ ಆದೇಶಿಸಿದೆ.
ಕರ್ನಾಟಕ ರಕ್ಷಣಾ ವೇದಿಕೆಯಲ್ಲಿ ಅನೇಕ ವರ್ಷಗಳಿಂದ ನಾಡು, ನುಡಿ, ನೆಲ, ಕನ್ನಡಪರ ನ್ಯಾಯಕ್ಕಾಗಿ ಹೋರಾಟಗಳನ್ನು ಮಾಡುತ್ತಾ ಬಂದಿರುವ ಇವರನ್ನು ಕರ್ನಾಟಕ ರಕ್ಷಣಾ ವೇದಿಕೆ ಗದಗ ಜಿಲ್ಲಾಧ್ಯಕ್ಷ ಹನಮಂತಪ್ಪ ಹೆಚ್.ಅಬ್ಬಿಗೇರಿಯವರು ಇವರನ್ನು ಗದಗ ಜಿಲ್ಲಾ ಮಹಿಳಾ ಘಟಕದ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ನೀಡಿದ್ದಾರೆ.



