ವಿಜಯಸಾಕ್ಷಿ ಸುದ್ದಿ, ಗದಗ: `ಲೋಕ ಜಾನಪದ’ ತ್ರೈಮಾಸಿಕ ಪತ್ರಿಕೆ ಆರಂಭಿಸುವ ಮೂಲಕ ಜಾನಪದ ಕಲೆ, ಸಾಹಿತ್ಯ, ಸಂಗೀತ, ಸಂಸ್ಕೃತಿಯನ್ನು ಇಂದಿನ ಪೀಳಿಗೆಗೆ ಪರಿಚಯಿಸುವ ಹಾಗೂ ಅಕಾಡೆಮಿಯ ಕಾರ್ಯ ಚಟುವಟಿಕೆಗಳನ್ನು ದಾಖಲಿಸುವ ಮತ್ತು ಜನತೆಗೆ ತಲುಪಿಸುವ ಉದ್ದೇಶದಿಂದ ಕರ್ನಾಟಕ ಜಾನಪದ ಅಕಾಡೆಮಿಯು ಪತ್ರಿಕೆ ಆರಂಭಿಸಿದ್ದು ಶ್ಲಾಘನೀಯ ಕಾರ್ಯ ಎಂದು ಕರ್ನಾಟಕ ರಾಜ್ಯ ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಸುರೇಶ ವಿ.ನಾಡಗೌಡರ ಮೆಚ್ಚುಗೆ ವ್ಯಕ್ತಪಡಿಸಿದರು.
ಕರ್ನಾಟಕ ಜಾನಪದ ಅಕಾಡೆಮಿಯ ಸದಸ್ಯರಾದ ಶಂಕ್ರಣ್ಣ ಸಂಕಣ್ಣವರಿಂದ ಕರ್ನಾಟಕ ಜಾನಪದ ಅಕಾಡೆಮಿಯಿಂದ ಆರಂಭಿಸಿದ `ಲೋಕ ಜಾನಪದ’ ಪತ್ರಿಕೆಯ ಪ್ರಥಮ ಸಂಚಿಕೆ ಸ್ವೀಕರಿಸಿ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ಪತ್ರಕರ್ತ ಹಾಗೂ ಹವ್ಯಾಸಿ ರಂಗ ಕಲಾವಿದ ಮೌನೇಶ ಚಿ.ಬಡಿಗೇರ(ನರೇಗಲ್ಲ) ಮತ್ತು ವಿಶ್ವವಿದ್ಯಾಲಯದ ಕನ್ನಡ ಪ್ರಾಧ್ಯಾಪಕ ಚಂದ್ರಪ್ಪ ಬಾರಂಗಿ ಸೇರಿದಂತೆ ಹಲವರು ಹಾಜರಿದ್ದರು.