ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಕೆ.ವ್ಹಿ.ಎಸ್.ಆರ್. ಸಂಯುಕ್ತ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಗುರುವಾರ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಗದಗ ಹಾಗೂ ಭೂಗೋಳಶಾಸ್ತ್ರ ವಿಷಯದ ಉಪನ್ಯಾಸಕರ ವೇದಿಕೆ ಗದಗ ಇವುಗಳ ಸಂಯುಕ್ತ ಆಶ್ರಯದಲ್ಲಿ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕನಕದಾಸ ಶಿಕ್ಷಣ ಸಮಿತಿಯ ಕಾರ್ಯಾಧ್ಯಕ್ಷ, ರಾಜ್ಯ ಬಿ.ಜೆ.ಪಿ. ಓ.ಬಿ.ಸಿ ಯುವ ಮೋರ್ಚಾ ಕಾರ್ಯದರ್ಶಿ ರವೀಂದ್ರನಾಥ ಬಿ.ದಂಡಿನ ವಹಿಸಿ ಮಾತನಾಡಿ, ಗದಗ ಜಿಲ್ಲೆಯಲ್ಲಿ ಇಂಥಹ ಕಾರ್ಯಾಗಾರವನ್ನು ಎಲ್ಲ ವಿಷಯದಲ್ಲಿ ಕೈಗೊಂಡಾಗ ಮಾತ್ರ ಜಿಲ್ಲೆಗೆ ಉತ್ತಮ ಫಲಿತಾಂಶ ದೊರೆಯಲು ಸಾಧ್ಯ. ಭೂಗೋಳಶಾಸ್ತ್ರ ವಿಷಯದಲ್ಲಿ ಪ್ರತಿವರ್ಷ ನಮ್ಮ ಕಾಲೇಜಿನ ಕನಿಷ್ಠ 10 ವಿದ್ಯಾರ್ಥಿಗಳು 100ಕ್ಕೆ 100 ಅಂಕಗಳನ್ನು ಗಳಿಸುತ್ತಾ ಬಂದಿದ್ದಾರೆ. ಸತತ ಸಮಯ ಪ್ರಜ್ಞೆ ಜೊತೆಗೆ ನಿಮ್ಮ ಸಮಯವನ್ನು ಜ್ಞಾನಾರ್ಜನೆಗೆ ಮೀಸಲಿಟ್ಟಾಗ ಮಾತ್ರ ಉತ್ತಮ ಜೀವನವನ್ನು ರೂಪಿಸಿಕೊಂಡು ಕುಟುಂಬಕ್ಕೆ, ಸಮಾಜಕ್ಕೆ ಹಾಗೂ ತಮ್ಮ ಕಾಲೇಜಿಗೆ ಉತ್ತಮ ಹೆಸರು ತರಲು ಸಾಧ್ಯ ಎಂದರು.
ಶಾಲಾ ಶಿಕ್ಷಣ (ಪದವಿಪೂರ್ವ) ಇಲಾಖೆಯ ಗದಗ ಜಿಲ್ಲಾ ಉಪನಿರ್ದೇಶಕ ಸಿದ್ಧಲಿಂಗ ಬಂಡು ಮಸನಾಯಕ ಮಾತನಾಡುತ್ತಾ, ಗದಗ ಜಿಲ್ಲೆಯಲ್ಲಿ ಭೂಗೋಳಶಾಸ್ತç ವಿಷಯದ ಕಾರ್ಯಾಗಾರ ಹಮ್ಮಿಕೊಂಡಿರುವುದು ಸಂತೋಷದ ವಿಷಯವಾಗಿದ್ದು ಈ ಕಾರ್ಯಾಗಾರದ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆದುಕೊಂಡು ಮುಂಬರುವ ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ನೀಡಬೇಕೆಂದರು.
ಪ್ರಾ. ವ್ಹಿ.ಎಸ್. ದಲಾಲಿ ಮಾತನಾಡಿದರು. ಕಾಲೇಜಿನ ಭೂಗೋಳಶಾಸ್ತ್ರ ಉಪನ್ಯಾಸಕ ಪ್ರದೀಪ ಜಿ.ನಾಯಕ ಸ್ವಾಗತಿಸಿ ಪ್ರಾಸ್ತಾವಿಕ ನುಡಿದರು. ಗದಗ ಜಿಲ್ಲೆಯ ಭೂಗೋಳಶಾಸ್ತ್ರ ಉಪನ್ಯಾಸಕರ ವೇದಿಕೆಯ ಅಧ್ಯಕ್ಷ ಈರಣ್ಣ ವ್ಹಿ.ಕಮತರ ಕಾರ್ಯಕ್ರಮವನ್ನು ನಿರೂಪಿಸಿದರು. ನಗರಸಭೆ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ರಾಜೇಂದ್ರ ಹಿರೇಮಠ ವಂದಿಸಿದರು.
ಕಾರ್ಯಾಗಾರದಲ್ಲಿ ರಾಜೇಂದ್ರ ಹಿರೇಮಠ, ಎ.ಡಿ. ತಹಸೀಲ್ದಾರ, ಗೀತಾ ಮಳ್ಳೂರ ಸ್ಭೆರಿದಂತೆ ಕೆ.ವ್ಹಿ.ಎಸ್.ಆರ್. ಮತ್ತು ಸಂಕೇತ ಪದವಿಪೂರ್ವ ಮಹಾವಿದ್ಯಾಲಯ ಗದಗ, ಕೆ.ವ್ಹಿ.ಎಸ್.ಆರ್. ಸಂಯುಕ್ತ ಪದವಿಪೂರ್ವ ಮಹಾವಿದ್ಯಾಲಯ ತಿಮ್ಮಾಪೂರದ ವಿದ್ಯಾರ್ಥಿಗಳು, ಸಿಬ್ಬಂದಿ ವರ್ಗದವರಿದ್ದರು.