Belagavi: ಮನೆಯಲ್ಲೇ ನೇಣಿಗೆ ಶರಣಾದ ಎಎಸ್ಐ: ಆತ್ಮಹತ್ಯೆಗೆ ಕಾರಣ ಏನು!?

0
Spread the love

ಬೆಳಗಾವಿ:- ಜಿಲ್ಲೆಯ ಅಥಣಿ ತಾಲೂಕಿನ ಅನಂತಪೂರ ಗ್ರಾಮದ ಮನೆಯಲ್ಲಿ ನೇಣು ಬಿಗಿದುಕೊಂಡು ಎಎಸ್ಐ ಸಾವನ್ನಪ್ಪಿದ ಘಟನೆ ಜರುಗಿದೆ.

Advertisement

ಐಗಳಿ ಪೋಲಿಸ್ ಠಾಣೆಯ ಎಎಸ್ಐ 50 ವರ್ಷದ ಶಂಭುಮೆತ್ರಿ ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ.

ಆದ್ರೆ, ಶಂಭು ಮೆತ್ರಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಅಥಣಿ ಪೋಲಿಸರು ಭೇಟಿ ನೀಡಿ ತನಿಖೆ ನಡೆಸಿದ್ದಾರೆ.

ಇನ್ನೂ ಕಳೆದ ತಿಂಗಳೂ ಅಷ್ಟೇ ಬೆಳಗಾವಿ ತಹಸೀಲ್ದಾರ್​​ ಕೊಠಡಿಯಲ್ಲೇ ಎಸ್​ಡಿಎ ನೌಕರ ಆತ್ಮಹತ್ಯೆ ಮಾಡಿಕೊಂಡಿದ್ದರು. ರುದ್ರಣ್ಣ ಯಡವಣ್ಣವರ ಎನ್ನುವ ದ್ವಿತೀಯ ದರ್ಜೆ ನೌಕರ ಬೆಳಗಾವಿ ತಹಸೀಲ್ದಾರ್ ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದರು. ವರ್ಗಾವಣೆ ಕಿರುಕುಳದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದರು.

ಇದರ ಬೆನ್ನಲ್ಲೇ ಇದೀಗ ಬೆಳಗಾವಿ ಜಿಲ್ಲೆಯಲ್ಲಿ ಮತ್ತೋರ್ವ ಸರ್ಕಾರಿ ನೌಕರ ಆತ್ಮಹತ್ಯೆ ಮಾಡಿಕೊಂಡಿದ್ದು, ಅಚ್ಚರಿಗೆ ಕಾರಣವಾಗಿದೆ. ಎಎಸ್​​ಐ ಆತ್ಮಹತ್ಯೆಗೆ ಇನ್ನೂ ನಿಖರ ಕಾರಣ ತಿಳಿದುಬಂದಿಲ್ಲ. ಸದ್ಯ ಈ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದು, ಬಳಿಕ ಆತ್ಮಹತ್ಯೆಗೆ ಕಾರಣ ಗೊತ್ತಾಗಲಿದೆ.


Spread the love

LEAVE A REPLY

Please enter your comment!
Please enter your name here