HomeASSEMBLE ELECTIONಪಕ್ಷೇತರ ಅಭ್ಯರ್ಥಿ ರಾಮಕೃಷ್ಣ ದೊಡ್ಡಮನಿ ಬಿಜೆಪಿ ಏಜೆಂಟ್, ಸೋಲಿಸಿ ಇಡಗಂಟು ಜಪ್ತ ಮಾಡಿ; ಸಿದ್ದರಾಮಯ್ಯ...

ಪಕ್ಷೇತರ ಅಭ್ಯರ್ಥಿ ರಾಮಕೃಷ್ಣ ದೊಡ್ಡಮನಿ ಬಿಜೆಪಿ ಏಜೆಂಟ್, ಸೋಲಿಸಿ ಇಡಗಂಟು ಜಪ್ತ ಮಾಡಿ; ಸಿದ್ದರಾಮಯ್ಯ ಕರೆ…..

For Dai;y Updates Join Our whatsapp Group

Spread the love

ಶಿರಹಟ್ಟಿ ಮೀಸಲು ಕ್ಷೇತ್ರ…….ಬಿಜೆಪಿ ದುಡ್ಡು ಕೊಟ್ಟು ನಿಲ್ಲಿಸಿದೆ….ಸಿದ್ದರಾಮಯ್ಯ ಗಂಭೀರ ಆರೋಪ…..

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ

ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ ನನ್ನ ಹೆಸರು ಬಳಸುವ ಕೆಲಸ ಬಿಡಬೇಕು. ಸುಜಾತ ದೊಡ್ಡಮನಿ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿದ್ದು, ಬೆಂಬಲಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ.

ತಾಲೂಕಿನ ಬೆಳ್ಳಟ್ಟಿ ಗ್ರಾಮದಲ್ಲಿ ಏರ್ಪಡಿಸಿದ್ದ ಶಿರಹಟ್ಟಿ ಮೀಸಲು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುಜಾತ ದೊಡ್ಡಮನಿ ಪರವಾಗಿ ಕೈಗೊಂಡಿದ್ದ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಯಾರೇ ಬಂಡಾಯ ನಿಂತರೂ ನಾನು ಖಂಡಿಸಿತ್ತೇನೆ ಎಂದ ಸಿದ್ದರಾಮಯ್ಯ, ಶಿಸ್ತು ಉಲ್ಲಂಘನೆ ಮಾಡಿದ್ರೆ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದರು.

ವಿಧಾನಸಭಾ ಚುನಾವಣಾ ಹಿನ್ನೆಲೆಯಲ್ಲಿ ಕೈಗೊಂಡಿದ್ದ ಸರ್ವೇಯಲ್ಲಿ ರಾಮಕೃಷ್ಣ ದೊಡ್ಡಮನಿ ಅವರ ಹೆಸರು ಇರಲಿಲ್ಲ, ಹೀಗಾಗಿ ಸುಜಾತ ದೊಡ್ಡಮನಿ ಅವರಿಗೆ ಟಿಕೆಟ್ ನೀಡಲಾಗಿದೆ ಎಂದರು.

ರಾಮಕೃಷ್ಣ ದೊಡ್ಡಮನಿಗೆ ಸಲಹೆ ಕೊಟ್ಟರೂ ನನ್ನ ಮಾತನ್ನು ದಿಕ್ಕಿರಿಸಿ ಬಂಡಾಯ ಅಭ್ಯರ್ಥಿಯಾಗಿ ನಿಂತಿದ್ದಾರೆ. ಬಿಜೆಪಿ ಪಕ್ಷದವರೇ ದುಡ್ಡು ಕೊಟ್ಟು ನಿಲ್ಲಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇರ ಆರೋಪ ಮಾಡಿದರು.

ಆ ಕಾರಣಕ್ಕಾಗಿ ರಾಮಕೃಷ್ಣ ದೊಡ್ಡಮನಿ ಅವರನ್ನು ಸೋಲಿಸಿ. ಇಡಗಂಟು ಜಪ್ತ ಮಾಡಬೇಕು ಎಂದು ನೆರೆದ ಕಾರ್ಯಕರ್ತರಿಗೆ ಕರೆ ನೀಡಿದರು.

ಹೆಣ್ಣು ಮಗಳಿಗೆ ಟಿಕೆಟ್ ಕೊಟ್ಟಿದ್ದು ತಪ್ಪಾ ಎಂದು ಪ್ರಶ್ನಿಸಿದ ಅವರು, ದುಡ್ಡಿನ ಅಹಂಕಾರದಿಂದ ಚುನಾವಣೆಗೆ ನಿಂತ ರಾಮಕೃಷ್ಣ ದೊಡ್ಡಮನಿಗೆ ಮತ ಹಾಕಬೇಡಿ ಕರೆ ನೀಡಿದರು.

ಇದಕ್ಕೂ ಮೊದಲು ಮಾಜಿ ಸಚಿವ, ಶಾಸಕ ಎಚ್ ಕೆ ಪಾಟೀಲ್ ಮಾತನಾಡಿ, ಬಿಜೆಪಿ ಸರಕಾರ ಶೇ.10 ರಷ್ಟು ಭರವಸೆ ಈಡೇರಿಸಿಲ್ಲ. ಕಾಂಗ್ರೆಸ್ ಸರಕಾರ ಅಧಿಕಾರದಲ್ಲಿದ್ದಾಗ 165 ಭರವಸೆಗಳಲ್ಲಿ 158 ಈಡೇರಿಸಿದ ಕೀರ್ತಿ ಸಿದ್ದರಾಮಯ್ಯ ಅವರಿಗೆ ಸಲ್ಲುತ್ತದೆ. ಹಸಿವು ಮುಕ್ತ ರಾಜ್ಯವನ್ನಾಗಿಸುವದಕ್ಕಾಗಿ ಪ್ರತಿ ಒಬ್ಬರಿಗೆ ತಲಾ 10 ಕೆ.ಜಿ ಅಕ್ಕಿ ನೀಡಲು ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ ತುಂಬಿ. ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ಅವರ ಕೈ ಬಲಪಡಿಸಲು ಶಿರಹಟ್ಟಿ ಕ್ಷೇತ್ರದಲ್ಲಿ ಕೈ ಅಭ್ಯರ್ಥಿ ಸುಜಾತ ದೊಡ್ಡಮನಿ ಅವರಿಗೆ ಮತ ನೀಡಿ ಎಂದು ಕರೆ ನೀಡಿದರು.

ಸಮಾವೇಶದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಮುಖಂಡರಾದ ಕೆ.ಬಿ ಕೋಳಿವಾಡ, ಮಾಜಿ ಸಂಸದ ಐ.ಜಿ ಸನದಿ, ಮಾಜಿ ಶಾಸಕ ಜಿ ಎಸ್ ಗಡ್ಡದ್ದೇವರಮಠ, ಶಿರಹಟ್ಟಿ ಬ್ಲಾಕ್ ಅಧ್ಯಕ್ಷ ಹುಮಾಯೂನ್‌ ಮಾಗಡಿ, ಮುಖಂಡರಾದ ವಾಸಣ್ಣ ಕುರಡಗಿ, ಅಭ್ಯರ್ಥಿ ಸುಜಾತ ದೊಡ್ಡಮನಿ ಸೇರಿದಂತೆ ಸಾವಿರಾರು ಕಾರ್ಯಕರ್ತರು ಇದ್ದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!