ಹಾಸನ:- ಜಿಲ್ಲೆಯ ಸಕಲೇಶಪುರ ಪಟ್ಟಣದ ಲಕ್ಷ್ಮೀಪುರ ಬಡಾವಣೆಯಲ್ಲಿ ಖಾಸಗಿ ಶಾಲೆಯ ಸಿಬ್ಬಂದಿ ಮೇಲೆ ಹೆಜ್ಜೇನು ದಾಳಿ ನಡೆಸಿದ ಘಟನೆ ಜರುಗಿದೆ.
Advertisement
ಇನ್ನೂ ದಾಳಿಯಿಂದ ಸುಮಾರು 9 ಮಂದಿಗೆ ಗಾಯಗಳಾಗಿದ್ದು, ಓರ್ವ ಮಹಿಳೆಯ ಸ್ಥಿತಿ ಗಂಭೀರವಾಗಿದೆ. ರೋಟರಿ ಶಾಲೆಯ ಸಿಬ್ಬಂದಿ ಶಾಲೆ ಮುಗಿಸಿಕೊಂಡು, ಮನೆಗೆ ತೆರಳುವಾಗ ಹೆಜ್ಜೇನು ದಾಳಿ ಮಾಡಿದೆ. ಇನ್ನೂ ಶಾಲೆಯ ಎದುರಿಗೆ ಇರುವ ಮನೆಯ ಮುಂದೆ ನಿಂತಿದ್ದ ವರ್ಗಿಸ್ ಎಂಬವರ ಮೇಲೂ ಹೆಜ್ಜೇನು ದಾಳಿ ನಡೆಸಿದೆ.
ಹೆಜ್ಜೇನು ದಾಳಿಯಿಂದಾಗಿ ಕೋಮಲ ಎಂಬ ಮಹಿಳೆ ಸ್ಥಿತಿ ಗಂಭೀರವಾಗಿದೆ. ಉಳಿದಂತೆ ಭಾಸ್ಕರ್, ಸೋಮಶೇಖರ್, ರವಿ, ಚೈತನ್ಯ, ಸಂಜಯ್, ಅಕ್ಷಯ್ ಮತ್ತು ವಿಶ್ವನಾಥ್ ಹೆಜ್ಜೇನು ದಾಳಿಯಿಂದ ಗಾಯಗೊಂಡಿದ್ದು ಸಕಲೇಶಪುರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.