ದೊಡ್ಡಬಳ್ಳಾಪುರ: ಬೆಳೆ ಸಮೀಕ್ಷೆ ಮಾಡಲು ಹೋದ ಸಿಬ್ಬಂದಿ ಮೇಲೆ ಹಲ್ಲೆ! ಆರೋಪಿ ಅರೆಸ್ಟ್

0
Spread the love

ದೊಡ್ಡಬಳ್ಳಾಪುರ: ಬೆಳೆ ಸಮೀಕ್ಷೆ ನಡೆಸಲು ಮೊಬೈಲ್ ನಲ್ಲಿ ಪೋಟೋ ತೆಗೆಯುತ್ತಿದ್ದ ವೇಳೆ ಗ್ರಾಮಲೆಕ್ಕಾ ಧಿಕಾರಿ ಮೇಲೆ ಜಮೀನಿನ ಮಾಲಿಕನ ಮಗ ಏಕಾಏಕಿ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರದ ಖಾಸ್ ಬಾಗ್ ನ ಕೃಷ್ಣಪ್ಪ ನವರ ಜಮೀನಿನಲ್ಲಿನಡೆದಿದೆ. ರಾಜೇಂದ್ರ ಬಾಬು ಹಲ್ಲೆಗೊಳಗಾದ ಗ್ರಾಮಲೆಕ್ಕಾಧಿಕಾರಿ ಯಾಗಿದ್ದು, ಕಂದಾಯ ಇಲಾಖೆ ಆದೇಶದಂತೆ ಪ್ರತಿ ಜಮೀನಿನ ಬೆಳೆ ಸಮೀಕ್ಷೆ ನಡೆಸಲು ಮೊಬೈಲ್ ಮೂಲಕ ಸ್ಥಳಕ್ಕೆ ಹೋಗಿ ಪೋಟೋ ಅಪ್ ಲೋಡ್ ಮಾಡಬೇಕು.

Advertisement

ಆದ್ದರಿಂದ ಪೋಟೋ ತೆಗೆಯುವ ಸಂದರ್ಭದಲ್ಲಿ ಈ ವೇಳೆ ಪೋಟೊ ತೆಗೆದಿದ್ದು ಯಾಕೆ ಎಂದು ಏಕಾಏಕಿ ಹಲ್ಲೆ ಮಾಡಿದ್ದಾನೆ. ತೆಂಗಿನ ಮೊಟ್ಟೆಯಿಂದ ಗ್ರಾಮಲೆಕ್ಕಾಧಿಕಾರಿ ತಲೆ ಕೈ ಎದೆ ಭಾಗಕ್ಕೆ ಮಾರಾಣಾಂತಿಕವಾಗಿ ಹಲ್ಲೆ ಮಾಡಿದ್ದಾನೆ. ದೊಡ್ಡಬಳ್ಳಾಪುರ ನಗರ ಠಾಣೆ ಪೊಲೀಸರು ಆರೋಪಿ ವಸಂತ್ ನನ್ನ ಬಂಧಿಸಿದ್ದು, ಘಟನೆ ಸಂಬಂಧ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆ ಪ್ರಕರಣ ದಾಖಲು ಮಾಡಲಾಗಿದೆ.

 


Spread the love

LEAVE A REPLY

Please enter your comment!
Please enter your name here