ಕಾಂಗ್ರೆಸ್ ಸರ್ಕಾರ ಇದ್ದಾಗ ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ ಆಗೋದು, ಕೊಲೆ ಮಾಡೋದು ಸಾಮಾನ್ಯ: ಜೋಶಿ ಕಿಡಿ

0
Spread the love

ಹುಬ್ಬಳ್ಳಿ: ಕಾಂಗ್ರೆಸ್ ಸರ್ಕಾರ ಇದ್ದಾಗ ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ ಆಗೋದು, ಕೊಲೆ ಮಾಡೋದು ಸಾಮಾನ್ಯವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇದ್ದಾಗ ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ ಆಗೋದು, ಕೊಲೆ ಮಾಡೋದು ಸಾಮಾನ್ಯವಾಗಿದೆ. ರಾಜ್ಯ ಸರ್ಕಾರ ಕೂಡಾ ಕೊಲೆಗಡುಕರನ್ನು ರಕ್ಷಣೆ ಮಾಡುತ್ತದೆ ಎಂದು ಕಿಡಿಕಾರಿದರು.

Advertisement

ಇನ್ನೂ ಪಾಕಿಸ್ತಾನ ಬಗ್ಗೆ ಏನು ಕ್ರಮ ಕೈಗೊಳ್ಳಬೇಕೋ ಅದನ್ನು ಕೇಂದ್ರ ತಗೆದುಕೊಳ್ಳುತ್ತದೆ. ಇದರಿಂದ ಈಗಾಗಲೇ ಪಾಕಿಸ್ತಾನ ಒದ್ದಾಡುತ್ತಿದೆ. ಸೂಕ್ತ ಸಮಯದಲ್ಲಿ ಸೂಕ್ತ ಕ್ರಮ ಖಂಡಿತ ಆಗುತ್ತದೆ. ಕಾಲಮಿತಿ ಹಾಕಿ ಹೀಗೆ ಮಾಡಬೇಕು ಅಂತ ಹೇಳಲು ಆಗಲ್ಲ.

ಪ್ರಧಾನಿ, ರಕ್ಷಣಾ ಮಂತ್ರಿಗಳು ಸ್ಪಷ್ಟ ಭರವಸೆ ನೀಡಿದ್ದಾರೆ. ತಪ್ಪು ಮಾಡಿದವರಿಗೆ ಶಿಕ್ಷೆ ಆಗುತ್ತದೆ. ಜಮೀರ್ ಅಹ್ಮದ್ ಮೊದಲು ಶಾಂತ ರೀತಿಯಿಂದ ಇದ್ರೆ ಸಾಕು. ದೇಶದಲ್ಲಿ ನಮ್ಮ ಮಿಲಿಟರಿ ಪಡೆ ಕ್ರಮ ಕೈಗೊಳ್ಳುತ್ತದೆ. ಅವರು ಶಾಂತಿ ಮತ್ತು ಸಮಾಧಾನದಿಂದ ಇದ್ದರೆ ಸಾಕು ಎಂದು ಹೇಳಿದರು.


Spread the love

LEAVE A REPLY

Please enter your comment!
Please enter your name here