ಹುಬ್ಬಳ್ಳಿ: ಇಲ್ಲಿನ ಕಲಘಟಗಿಯಲ್ಲಿ ಮುಸ್ಲಿಂ ಧರ್ಮಕ್ಕೆ ಮತಾಂತರ ಆಗುವಂತೆ ಪತ್ನಿಗೆ ಕಿರುಕುಳ ನೀಡಿ, ಕೊಲೆ ಬೆದರಿಕೆ ಹಾಕಿದ ಆರೋಪಿಯ ವಿರುದ್ಧ ದೂರು ದಾಖಲಾಗಿದೆ ಹೌದು ಮುಜಾಹಿದ್ ಖಾನ್ ಕೊಲೆ ಬೆದರಿಕೆ ಹಾಕಿದ ಆರೋಪಿ. ರೇಖಾ ಕಿರುಕುಳಕ್ಕೆ ಒಳಗಾದ ಸಂತ್ರಸ್ತೆಯಾಗಿದ್ದಾರೆ. ರೇಖಾ ಬೆಂಗಳೂರಿನಲ್ಲಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು.
ರೇಖಾ ಕೆಲಸ ಮಾಡುತ್ತಿದ್ದ ಕಂಪನಿಯಲ್ಲೇ ಮುಜಾಹಿದ್ ಖಾನ್ ಕಾರ್ಯ ನಿರ್ವಹಿಸುತ್ತಿದ್ದಾನೆ. ಇಬ್ಬರು ಸಹೋದ್ಯೋಗಿಗಳಾಗಿದ್ದರಿಂದ ಸ್ನೇಹ ಬೆಳೆದಿದೆ. ಸ್ನೇಹ ಪ್ರೇಮಕ್ಕೆ ತಿರುಗಿದೆ. ನಂತರ 2017ರಲ್ಲಿ ಮುಜಾಹಿದ್ ಖಾನ್ ಮತ್ತು ರೇಖಾ ವಿವಾಹವಾಗಿದ್ದಾರೆ. ಆದರೆ, ಮುಜಾಹಿದ್ ಖಾನ್ಗೆ ಒಂದು ಮದುವೆಯಾಗಿದ್ದು, ನಾಲ್ಕು ಮಕ್ಕಳಿದ್ದಾರೆ. ಈ ವಿಚಾರವನ್ನು ಮುಚ್ಚಿಟ್ಟು ಮುಜಾಹಿದ್ ಖಾನ್ ಎರಡನೇ ಮದುವೆಯಾಗಿದ್ದಾನೆ. ಮದುವೆಯಾದ ಹೊಸದರಲ್ಲಿ ಎಲ್ಲವೂ ಚೆನ್ನಾಗಿಯೇ ಇತ್ತು.
ರೇಖಾಗೆ ಮುಜಾಹಿದ್ ಖಾನ್ನ ಮೊದಲನೇ ಮದುವೆ ವಿಚಾರ ತಿಳಿದಿದೆ. ಮತ್ತು ಮುಜಾಹಿದ್ ಖಾನ್ ಮುಸ್ಲಿಂ ಧರ್ಮಕ್ಕೆ ಮತಾಂತರ ಆಗುವಂತೆ ರೇಖಾಗೆ ಒತ್ತಾಯ ಮಾಡಲು ಆರಂಭಿಸಿದ್ದಾನೆ. ಈ ವಿಚಾರವಾಗಿ ಇಬ್ಬರು ಜಗಳವಾಡಿದ್ದಾರೆ. ಇಬ್ಬರ ನಡುವೆ ಬಿರುಕು ಮೂಡಿದೆ. ಸದ್ಯ ಬಲವಂತಾಗಿ ಮತಾಂತರ ಆಗು, ಜೀವ ಬೆದರಿಕೆ ಹಾಕುತ್ತಿದ್ದಾನೆ ದೂರು ನೀಡಿದ್ದು, ಕಲಘಟಗಿ ಪೊಲೀಸ್ ಠಾಣೆಯಲ್ಲಿ ಮುಜಾಹಿದ್ ಖಾನ್ ವಿರುದ್ದ ದೂರು ದಾಖಲಾಗಿದೆ.