ಬೆಂಗಳೂರು: ಸಿದ್ದರಾಮಯ್ಯರನ್ನು ಇಳಿಸಬೇಕು ಅಂತಾ ಕಾಂಗ್ರೆಸ್ʼನಲ್ಲೇ ಪ್ರಯತ್ನ ನಡೆದಿದೆ ಎಂದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ B.Y ವಿಜಯೇಂದ್ರ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ನೇರವಾಗಿ ಬಿಜೆಪಿ ಮೇಲೆ ಆರೋಪ ಹೊರಿಸಿದ್ದಾರೆ.
Advertisement
ವಾಸ್ತವಿಕವಾಗಿ ಸಿಎಂ ಮತ್ತು ಅವರ ಕುಟುಂಬ ಭ್ರಷ್ಟಾಚಾರದಲ್ಲಿ ಮುಳುಗಿದೆ. 5-6 ಹಿರಿಯ ಮುಖಂಡರಿಂದ ಸಿದ್ದರಾಮಯ್ಯರನ್ನು ಇಳಿಸಬೇಕು ಅಂತಾ ಕಾಂಗ್ರೆಸ್ನಲ್ಲೇ ಪ್ರಯತ್ನ ನಡೆದಿದೆ ಎಂದು ತಿರುಗೇಟು ನೀಡಿದ್ದಾರೆ.ಇನ್ನೂ ರಾಜ್ಯದ ರೈತರ ಆತಂಕದಲ್ಲಿದ್ದಾರೆ.
ರಾಜ್ಯ ಸರ್ಕಾರ ಸ್ಪಷ್ಟ ಉತ್ತರ ನೀಡುವವರೆಗೂ ನಮ್ಮ ಹೋರಾಟ ನಿರಂತರ. ತಂಡದಲ್ಲಿ ಎಲ್ಲ ಹಿರಿಯರು, ಶಾಸಕರು, ಕೇಂದ್ರ ಸಚಿವರು ಇರುತ್ತಾರೆ. ಯಡಿಯೂರಪ್ಪ ರೈತರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದವರು. ಬಿಜೆಪಿ ರೈತರ ವಿಚಾರದಲ್ಲಿ ಹೋರಾಟದಿಂದ ಹಿಂದೆ ಸರಿಯಲ್ಲ ಎಂದಿದ್ದಾರೆ.