ಬೆಂಗಳೂರು :- ಇದು ಮೆಟ್ರೋ ಪ್ರಯಾಣಿಕರು ನೋಡಲೇಬೇಕಾದ ಸುದ್ದಿ. ಜೂನ್ 22 ರಂದು ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದ್ದು, ಪ್ರಯಾಣಿಕರು ಸಹಕರಿಸುವಂತೆ BMRCL ಕೋರಿದೆ. ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು ಇದೇ ಜೂನ್ 22 ರ ಭಾನುವಾರದಂದು ನೇರಳೆ ಮಾರ್ಗದ ಹಲಸೂರು ಮತ್ತು ಟ್ರಿನಿಟಿ ಮೆಟ್ರೋ ನಿಲ್ದಾಣಗಳ ನಡುವೆ ನಿಗದಿತ ನಿರ್ವಹಣಾ ಕಾಮಗಾರಿ ಕೈಗೊಳ್ಳುತ್ತಿದೆ. ಹೀಗಾಗಿ ಅಂದು ಬೆಳಗ್ಗೆ 7 ಗಂಟೆಯಿದ 9 ಗಂಟೆವರೆಗೆ ಎಂ.ಜಿ ರಸ್ತೆ- ಬೈಯ್ಯಪ್ಪನಹಳ್ಳಿ ಮಾರ್ಗದ ಮಧ್ಯೆ ತಾತ್ಕಾಲಿಕವಾಗಿ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಆಗಲಿದೆ.
ಇದೇ ನೇರಳೆ ಮಾರ್ಗದ ಇತರೆ ಮಾರ್ಗಗಳಾದ ಚಲ್ಲಘಟ್ಟದಿಂದ ಎಂ.ಜಿ ರಸ್ತೆ ಮತ್ತು ಬೈಯ್ಯಪ್ಪನಹಳ್ಳಿಯಿಂದ ವೈಟ್ಫೀಲ್ಡ್ ಬೆಳಗ್ಗೆ 7 ಗಂಟೆಯಿಂದ ನಿಗದಿಯಂತೆ ಕಾರ್ಯನಿರ್ವಹಿಸಲಿದೆ. ಹಾಗೂ ಹಸಿರು ಮಾರ್ಗದ ರೆಸ್ಮ್ ಸಂಸ್ಥೆ ಮತ್ತು ಮಾದಾವರ ನಡುವೆ ಮೆಟ್ರೋ ಸೇವೆಗಳು ಬೆಳಗ್ಗೆ 7 ಗಂಟೆಯಿಂದ ಎಂದಿನಂತೆ ಕಾರ್ಯನಿರ್ವಸಲಿದೆ. ಮೆಟ್ರೋ ಪ್ರಯಾಣಿಕರು ತಮ್ಮ ಪ್ರಯಾಣವನ್ನು ಪೂರ್ವ ತಯಾರಿಗೆ ಯೋಜಿಸಿಕೊಳ್ಳುವಂತೆ ವಿನಂತಿಸಲಾಗಿದೆ. ಪ್ರಯಾಣಿಕರಿಗೆ ತಾತ್ಕಾಲಿಕವಾಗಿ ತೊಂದರೆ ಆಗುತ್ತಿರುವುದಕ್ಕೆ ಬಿಎಂಆರ್ಸಿಎಲ್ ವಿಷಾದ ವ್ಯಕ್ತಪಡಿಸಿದೆ.