HomeBengaluru Newsವಾಹನ ಸವಾರರ ಗಮನಕ್ಕೆ: ಇಲ್ಲೆಲ್ಲಾ ನಾಳೆ ವಾಹನಗಳ ಸಂಚಾರ ತಾತ್ಕಾಲಿಕ ನಿಷೇಧ!

ವಾಹನ ಸವಾರರ ಗಮನಕ್ಕೆ: ಇಲ್ಲೆಲ್ಲಾ ನಾಳೆ ವಾಹನಗಳ ಸಂಚಾರ ತಾತ್ಕಾಲಿಕ ನಿಷೇಧ!

For Dai;y Updates Join Our whatsapp Group

Spread the love

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನ ವಾಹನ ಸವಾರರು ನೋಡಲೇಬೇಕಾದ ಸ್ಟೋರಿ. ಮುಸ್ಲಿಂ ಬಾಂಧವರ ಮತ್ತೊಂದು ಪ್ರಮುಖ ಹಬ್ಬವಾದ ಬಕ್ರೀದ್‌ ಆಚರಣೆಗೆ ಸಿದ್ಧತೆ ನಡೆದಿದ್ದು, ನಾಳೆ ಕರ್ನಾಟಕದಲ್ಲಿ ಬಕ್ರೀದ್ ಹಬ್ಬವನ್ನು ಮುಸ್ಲಿಂ ಬಾಂಧವರು ಅದ್ಧೂರಿಯಾಗಿ ಆಚರಿಸುತ್ತಾರೆ. ಹೀಗಾಗಿ ಪ್ರಾರ್ಥನೆ ಸಲ್ಲಿಸುವ ಮೂಲಕ ಹಬ್ಬ ಆಚರಣೆ ಹಿನ್ನೆಲೆ ಇತ್ತ ಚಾಮರಾಜಪೇಟೆ 1ನೇ ಮುಖ್ಯರಸ್ತೆಯ ಬಿಬಿಎಂಪಿ ಆಟದ ಮೈದಾನ ಹಾಗೂ ಬಿಬಿ ಜಂಕ್ಷನ್​ನಲ್ಲಿ ಪ್ರಾರ್ಥನೆ ನಡೆಯುವುದರಿಂದ ಮೈಸೂರು ರಸ್ತೆಯ ಬಿಜಿಎಸ್​ ಪ್ಲೈಓವರ್ ಬೆಳಿಗ್ಗೆ 8:00 ಗಂಟೆಯಿಂದ ಪ್ರಾರ್ಥನೆ ಮುಗಿಯುವವರೆಗೆ ತಾತ್ಕಾಲಿಕವಾಗಿ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.

ಈ ಬಗ್ಗೆ ಚಾಮರಾಜಪೇಟೆ ಸಂಚಾರ ಪೊಲೀಸ್​​ ಠಾಣೆ ಟ್ವೀಟ್ ಮಾಡಿದ್ದು, ಪ್ರತಿ ವರ್ಷದಂತೆ ಬೆಂಗಳೂರು ನಗರದ ಚಾಮರಾಜಪೇಟೆ ಸಂಚಾರ ಪೊಲೀಸ್ ಠಾಣಾ ಸರಹದ್ದಿನ ಮೈಸೂರು ರಸ್ತೆಯ ಬಿ.ಬಿ ಜಂಕ್ಷನ್ ಹತ್ತಿರದ ಮಸೀದಿ ಮತ್ತು ಚಾಮರಾಜಪೇಟೆ 1ನೇ ಮುಖ್ಯ ರಸ್ತೆಯ 7ನೇ ಅಡ್ಡರಸ್ತೆ ಬಳಿಯ ಬಿಬಿಎಂಪಿ ಆಟದ ಮೈದಾನದಲ್ಲಿ ನಾಳೆ ಬಕ್ರೀದ್ ಹಬ್ಬದ ಪ್ರಯುಕ್ತ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆಯನ್ನು ಸಲ್ಲಿಸಲು ಅಪಾರ ಸಂಖ್ಯೆಯಲ್ಲಿ ಸೇರುವುದರಿಂದ ಮೈಸೂರು ರಸ್ತೆಯಲ್ಲಿ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿ, ಕೆಳಕಂಡಂತೆ ವಾಹನಗಳ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

ನಾಳೆ ಬೆಳಿಗ್ಗೆ 08 ಗಂಟೆಯಿಂದ ಪ್ರಾರ್ಥನೆ ಮುಗಿಯುವವರೆಗೆ ನಿಷೇಧ:

ಮೈಸೂರು ರಸ್ತೆಯ ಟೋಲ್​ ಗೇಟ್ ಜಂಕ್ಷನ್​ನಿಂದ ಬಿಬಿ ಜಂಕ್ಷನ್ ಮೂಲಕ ಬಿಜಿಎಸ್ ಪ್ರೈಓವರ್ ಮೇಲ್ಬಾಗದಿಂದ ಟೌನ್‌ಹಾಲ್‌ವರೆಗೆ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ.

ಟೌನ್​​ಹಾಲ್ ಕಡೆಯಿಂದ ಮೈಸೂರು ಕಡೆಗೆ ಬಿಜಿಎಸ್ ಪ್ರೈಓವರ್ ಮೇಲ್ಬಾಗದಿಂದ ಬಿಬಿ ಜಂಕ್ಷನ್ ಮಾರ್ಗವಾಗಿ ಟೋಲ್‌ಗೇಟ್ ಜಂಕ್ಷನ್​ವರೆಗೆ ಎಲ್ಲಾ ಮಾದರಿಯ ವಾಹನಗಳ ಸಂಚಾರ ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ..

ಪರ್ಯಾಯ ಮಾರ್ಗಗಳು:
ಮೈಸೂರು ಕಡೆಯಿಂದ ಟೌನ್ ಹಾಲ್ ಕಡೆಗೆ ಹೋಗುವ ವಾಹನಗಳು ಬ್ಯಾಟರಾಯನಪುರ ಸಂಚಾರ ಠಾಣಾ ಸರಹದ್ದಿನ ಕಿಮ್ಕೋ ಜಂಕ್ಷನ್​ನಲ್ಲಿ ಎಡತಿರುವು ಪಡೆದುಕೊಂಡು ವಿಜಯನಗರ ಮೂಲಕ ಸಾಗಬಹುದಾಗಿದೆ.

ಟೌನ್​​ಹಾಲ್ ಕಡೆಯಿಂದ ಮೈಸೂರು ಕಡೆಗೆ ಹೋಗುವ ವಾಹನಗಳು ಬಿಜಿಎಸ್ ಪ್ರೈಓವ‌ರ್ ಕೆಳಗಡೆ ಸರ್ವಿಸ್ ರಸ್ತೆಯನ್ನು ಬಳಸಿಕೊಂಡು ಭಾರಿ ವಾಹನಗಳು ವೆಟರ್ನರಿ ಜಂಕ್ಷನ್‌ನಲ್ಲಿ ಬಲ ತಿರುವು ಪಡೆದು ಗೂ‌ಡ್​​ಶೆಡ್ ರಸ್ತೆ ಮೂಲಕ ಮತ್ತು ಲಘು ವಾಹನಗಳು ಸಿರಸಿ ಜಂಕ್ಷನ್‌ನಲ್ಲಿ ಬಲ ತಿರುವು ಪಡೆದುಕೊಂಡು ಜಿಜಿ ನಗರ-ಟ್ಯಾಕ್​ಬಂಡ್​ ರಸ್ತೆ ಬಿನ್ನಿಮಿಲ್​ ಜಂಕ್ಷನ್​ ​ಹುಣಸೇಮರ ಮೂಲಕ ಸಾಗುವುದು.

ಬಸವನಗುಡಿ ಮತ್ತು ಚಾಮರಾಜಪೇಟೆ ಕಡೆಯಿಂದ ಮೆಜೆಸ್ಟಿಕ್​​ ಕಡೆಗೆ ಹೋಗುವಂತಹ ವಾಹನಗಳು ಚಾಮರಾಜಪೇಟೆ 1ನೇ ಮುಖ್ಯರಸ್ತೆ, 6ನೇ ಅಡ್ಡ ರಸ್ತೆ ಮೂಲಕ ಮೈಸೂರು ರಸ್ತೆ, ಸಿರ್ಸಿ ಸರ್ಕಲ್​​, ಬಿನ್ನಿಮಿಲ್​​ ರಸ್ತೆಯ ಮೂಲಕ ಸಾಗುವುದು ಇದಕ್ಕೆ ಸಾರ್ವಜನಿಕರು ಸಂಚಾರ ಪೊಲೀಸರೊಂದಿಗೆ ಸಹಕರಿಸಲು ಕೋರಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!