HomeKarnataka Newsಹನೂರು ಭಾಗದ ಜನರೇ ಗಮನಿಸಿ: ಇಂದು 8 ಗಂಟೆ ಪವರ್‌ ಕಟ್!

ಹನೂರು ಭಾಗದ ಜನರೇ ಗಮನಿಸಿ: ಇಂದು 8 ಗಂಟೆ ಪವರ್‌ ಕಟ್!

For Dai;y Updates Join Our whatsapp Group

ಹನೂರು: ಹನೂರು ಉಪವಿಭಾಗದ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

ಚೆಸ್ಕಾಂ ವತಿಯಿಂದ 66/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರಗಳ ವ್ಯಾಪ್ತಿಯಲ್ಲಿ ತ್ರೈಮಾಸಿಕ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಈ ವಿದ್ಯುತ್ ಕಡಿತ ಘೋಷಿಸಲಾಗಿದೆ.

ಈ ಪ್ರದೇಶಗಳಲ್ಲಿ ಪವರ್‌ ಕಟ್:

ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಬಂಡಳ್ಳಿ, ಅಜ್ಜೀಪುರ, ರಾಮಾಪುರ, ಕೌದಳ್ಳಿ ಮತ್ತು ಮಾಟಳ್ಳಿ ಸೇರಿದಂತೆ ಸಂಬಂಧಿತ ಫೀಡರ್‌ಗಳ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳಲಿದೆ.

ಇದರಿಂದ ಈ ಪ್ರದೇಶಗಳ ಮನೆಗಳು, ಅಂಗಡಿಗಳು, ಕಚೇರಿಗಳು ಹಾಗೂ ವಾಣಿಜ್ಯ ಸಂಸ್ಥೆಗಳಿಗೆ ಸುಮಾರು 8 ಗಂಟೆಗಳ ಕಾಲ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ವಿದ್ಯುತ್‌ ಅವಲಂಬಿತ ದೈನಂದಿನ ಹಾಗೂ ವ್ಯಾಪಾರ ಚಟುವಟಿಕೆಗಳಿಗೆ ತೊಂದರೆಯಾಗದಂತೆ ಸಾರ್ವಜನಿಕರು ಮತ್ತು ವ್ಯಾಪಾರಸ್ಥರು ಮುಂಚಿತವಾಗಿ ಅಗತ್ಯ ವ್ಯವಸ್ಥೆ ಮಾಡಿಕೊಳ್ಳುವಂತೆ ಚೆಸ್ಕಾಂ ಅಧಿಕಾರಿಗಳು ಮನವಿ ಮಾಡಿದ್ದಾರೆ.

ನಿರ್ವಹಣಾ ಕಾಮಗಾರಿ ನಡೆಯುವ ಸಂದರ್ಭದಲ್ಲಿ ಸಾರ್ವಜನಿಕರು ವಿದ್ಯುತ್ ಕಂಬಗಳು, ಹರಿದು ಬಿದ್ದಿರುವ ವಿದ್ಯುತ್ ತಂತಿಗಳು ಹಾಗೂ ಇತರ ವಿದ್ಯುತ್ ಉಪಕರಣಗಳ ಸಮೀಪ ತೆರಳದಂತೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ನಿಗದಿತ ಸಮಯಕ್ಕಿಂತ ಮೊದಲೇ ಕಾಮಗಾರಿ ಪೂರ್ಣಗೊಂಡಲ್ಲಿ ಯಾವುದೇ ಮುನ್ಸೂಚನೆ ಇಲ್ಲದೆ ವಿದ್ಯುತ್ ಸರಬರಾಜು ಪುನರಾರಂಭಿಸುವ ಸಾಧ್ಯತೆಯಿದೆ.

ವಿದ್ಯುತ್ ವ್ಯತ್ಯಯಕ್ಕೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ ಅಥವಾ ತುರ್ತು ಸಹಾಯಕ್ಕಾಗಿ ಹನೂರು ಉಪವಿಭಾಗದ 08224-295882 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ರಂಗಸ್ವಾಮಿ ತಿಳಿಸಿದ್ದಾರೆ.

ಸಾರ್ವಜನಿಕರು ಸಹಕರಿಸುವಂತೆ ಚೆಸ್ಕಾಂ ಮನವಿ ಮಾಡಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img