ಬೆಂಗಳೂರು: ಶಿವಣ್ಣ, ದರ್ಶನ್ ಮತ್ತು ಧ್ರುವ ಸರ್ಜಾ ಬಗ್ಗೆ ಆಡಿಯೋ ನನ್ನದಲ್ಲ ಎಂದು ಹಾಸ್ಯ ನಟ ಮಡೆನೂರು ಮನು ಹೇಳಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್ ಆಗಿದ್ದು, ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಣ್ಣ, ದರ್ಶನ್ ಮತ್ತು ಧ್ರುವ ಸರ್ಜಾ ಬಗ್ಗೆ ಆಡಿಯೋ ನನ್ನದಲ್ಲ. ನಾನು ಶಿವಣ್ಣ, ದರ್ಶನ್ ಮತ್ತು ಧ್ರುವ ಬಗ್ಗೆ ಮಾತನಾಡಿಲ್ಲ ಎಂದು ಹೇಳಿದ್ದಾರೆ.
ನಾನು ಮೊದಲು ದೊಡ್ಡವರು(ಶಿವಣ್ಣ) ಅವರನ್ನು ಭೇಟಿ ಮಾಡಿ ಸತ್ಯವನ್ನು ಅವರಿಗೆ ವಿವರಿಸಿ ಕ್ಷಮೆ ಕೇಳುತ್ತೇನೆ. ನನ್ನ ಮೂರು ವರ್ಷಗಳ ಶ್ರಮವನ್ನು ಹಾಳು ಮಾಡಿದ್ದಾರೆ. ಐದಾರು ಮಂದಿ ಪಕ್ಕಾ ಪ್ಲಾನ್ ಮಾಡಿ ನನ್ನ ಮುಗಿಸಿದ್ರು ಎಂದು ಹೇಳಿದ್ದಾರೆ.
ಸಾಕಷ್ಟು ಅಡೆತಡೆಗಳ ನಡುವೆ ಸಿನಿಮಾ ರಿಲೀಸ್ ಆಗಿದೆ. ನನ್ನ ವಿರುದ್ಧ ಪ್ರತಿ ಹಂತದಲ್ಲಿಯು ಷಡ್ಯಂತ್ರ ನಡೆಯಿತು. ಸಿನಿಮಾ ರಿಲೀಸ್ಗೂ ಮೊದಲು ಕುಣಿಗಲ್ ಬಳಿ ಮೊಟ್ಟೆ ಹೊಡೆದರು. ನನ್ನ ಮೇಲೆ ಹಲ್ಲೆ ನಡೆಸಿ ಬಟ್ಟೆಗಳನ್ನು ಹರಿದರು ಎಂದು ಆರೋಪಿಸಿದ್ದಾರೆ.