ವಿಜಯಸಾಕ್ಷಿ ಸುದ್ದಿ, ಗದಗ: 76ನೇ ಗಣರಾಜ್ಯೋತ್ಸವ ದಿನಾಚರಣೆಯ ಅಂಗವಾಗಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರನ್ನು ಗುರುತಿಸಿ ಜಿಲ್ಲಾಡಳಿತದಿಂದ ಸನ್ಮಾನಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಸೇರಿದಂತೆ ಗಣ್ಯರು ಸನ್ಮಾನ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.
ಸಾಂಸ್ಕೃತಿಕ, ಜಾನಪದ, ಶಿಲ್ಪಕಲೆ, ವೈದ್ಯಕೀಯ ಮತ್ತು ಆಡಳಿತ ಕ್ಷೇತ್ರ: 2024ರ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಕ್ಕಾಗಿ ನಗರದ ರೇಣುಕಾ ಹಾಸ್ಪಿಟಲ್ನ ಡಾ. ಜಿ.ಬಿ. ಬೀಡನಾಳ, 2024ರ ಸುವರ್ಣ ಸಂಭ್ರಮ-50ರ ಪ್ರಶಸ್ತಿಗೆ ಭಾಜನರಾಗಿದ್ದಕ್ಕಾಗಿ ಜಿಲ್ಲೆಯ ಕಳಸಾಪುರದ ಸುರೇಶ ಠಾಕರಪ್ಪ ಲಮಾಣಿ, ಕರ್ನಾಟಕ ಶಿಲ್ಪಕಲಾ ಅಕಾಡೆಮಿಯಿಂದ ಕೊಡಮಾಡುವ 2022ರ ವಾರ್ಷಿಕ ಪ್ರಶಸ್ತಿಗೆ ಭಾಜನರಾಗಿದ್ದಕ್ಕಾಗಿ ಲಕ್ಕುಂಡಿಯ ವೀರಭದ್ರಪ್ಪ ಕಾಳಪ್ಪ ಕವಲೂರು, ಮಲ್ಲಿಕಾರ್ಜುನ ಮನ್ಸೂರ ಟ್ರಸ್ಟ್ ಧಾರವಾಡ ವತಿಯಿಂದ ರಾಷ್ಟ್ರೀಯ ಯುವ ಪ್ರಶಸ್ತಿ ಪಡೆದಿದ್ದಕ್ಕಾಗಿ ಕೆ.ಕೆ.ಪಿ.ಪಿ.ಜಿ ಸಂಗೀತ ಮಹಾವಿದ್ಯಾಲಯದ ಪಂ.ವೆಂಕಟೇಶ ಅಲ್ಕೋಡ, ಸಂಗೀತ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ್ದಕ್ಕಾಗಿ ಖ್ಯಾತ ವಯೋಲಿನ್ ವಾದಕರಾದ ನಾರಾಯಣ ಹಿರೇಕೊಳಜಿ, ಸರ್ಕಾರಿ ಸೇವೆಯಲ್ಲಿ ಉತ್ತಮ ಕಾರ್ಯನಿರ್ವಹಣೆಗಾಗಿ ಎಚ್.ಆರ್. ಪಾಟೀಲ, ಗದಗ ಜಿಲ್ಲಾ ಆಸ್ಪತ್ರೆಯಲ್ಲಿ ಸಿಬ್ಬಂದಿಗಳ ಮೇಲ್ವಿಚಾರಕರಾಗಿ ಉತ್ತಮ ಸೇವೆ ಸಲ್ಲಿಸಿದ್ದಕ್ಕಾಗಿ ನಗರದ ಜಿಲ್ಲಾ ಆಸ್ಪತ್ರೆಯ ಮಲ್ಲಪ್ಪ ಭಾವಿಮನಿ ಅವರನ್ನು ಸನ್ಮಾನಿಸಲಾಯಿತು.
ಮಾಧ್ಯಮ ವಿಭಾಗ: ಮಾಧ್ಯಮ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿದಕ್ಕಾಗಿ ಕಿತ್ತೂರ ಕರ್ನಾಟಕ ದಿನಪತ್ರಿಕೆಯ ವರದಿಗಾರ ಹಾಗೂ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾಧ್ಯಕ್ಷ ರಾಜು ಹೆಬ್ಬಳ್ಳಿ, ವಿಜಯವಾಣಿ ದಿನಪತ್ರಿಕೆಯ ಜಿಲ್ಲಾ ವರದಿಗಾರ ಶಿವಾನಂದ ಹಿರೇಮಠ, ಇಂಡಿಯನ್ ಎಕ್ಸ್ಪ್ರೆಸ್ ದಿನಪತ್ರಿಕೆಯ ವರದಿಗಾರರಾದ ರಘೋತ್ತಮ ಕೊಪ್ಪರ, ಪ್ರಜಾ ಟಿವಿ ಜಿಲ್ಲಾ ವರದಿಗಾರ ಶರಣು ದೊಡ್ಡೂರು, ಸುವರ್ಣ ಟಿವಿ ಕ್ಯಾಮರಾಮನ್ ಲಿಂಗರಾಜ್ ಎಂ.ಆರ್., ನವೋದಯ ದಿನಪತ್ರಿಕೆಯ ವರದಿಗಾರ ಹನುಮಾನ್ ಸಿಂಗ್ ಜಮಾದಾರ, ರೋಣ ತಾಲೂಕಿನ ವಿಜಯವಾಣಿ ದಿನಪತ್ರಿಕೆಯ ವರದಿಗಾರ ಬಸವರಾಜ ಪಟ್ಟಣಶೆಟ್ಟಿ, ನರಗುಂದ ತಾಲೂಕಿನ ವಿಜಯ ಕರ್ನಾಟಕ ದಿನಪತ್ರಿಕೆಯ ವರದಿಗಾರ ಸಿ.ಬಿ. ಸುಬೇದಾರ, ಲಕ್ಮೇಶ್ವರ ತಾಲೂಕಿನ ಪ್ರಜಾವಾಣಿ ದಿನಪತ್ರಿಕೆಯ ವರದಿಗಾರ ನಾಗರಾಜ ಹಣಗಿ, ಮುಂಡರಗಿ ತಾಲೂಕಿನ ನಾಗರಿಕ ದಿನಪತ್ರಿಕೆ ವರದಿಗಾರ ಕವಿ ಬಂಕಾಪುರ, ಶಿರಹಟ್ಟಿ ತಾಲೂಕಿನ ಉದಯವಾಣಿ ವರದಿಗಾರ ಜಿ.ಬಿ. ಹೆಸರೂರ, ಮುಳಗುಂದದ ನವೋದಯ ದಿನಪತ್ರಿಕೆಯ ವರದಿಗಾರ ಮಹೇಶ ನೀಲಗುಂದ, ಗಜೇಂದ್ರಗಡ ತಾಲೂಕಿನ ಕನ್ನಡಪ್ರಭ ದಿನಪತ್ರಿಕೆಯ ವರದಿಗಾರ ಎಸ್.ಎಂ. ಸೈಯದ್ ಅವರನ್ನು ಸನ್ಮಾನಿಸಲಾಯಿತು.
ಶಿಕ್ಷಣ, ಸ್ಪರ್ಧೆ ಮತ್ತು ಸಾಮಾಜಿಕ ಕ್ಷೇತ್ರ: ಸಾಮಾಜಿಕ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದಕ್ಕಾಗಿ ಲಕ್ಮೇಶ್ವರದ ಕರಿಯಪ್ಪ ನೀಲಪ್ಪ ಶಿರಹಟ್ಟಿ, ಶೈಕ್ಷಣಿಕ ಕ್ಷೇತ್ರದಲ್ಲಿ ಹುಲಕೋಟಿಯ ರಾಜೇಶ್ವರ ವಿದ್ಯಾನಿಕೇತನ ಸಂಸ್ಥೆಯ ರಾಘವೇಂದ್ರ ಶೆಟ್ಟಿ, ಸಾರ್ವಜನಿಕ ಗ್ರಂಥಾಲಯ ಇಲಾಖೆ ಬೆಂಗಳೂರು ಇವರಿಂದ ರಾಷ್ಟ್ರೀಯ ಗ್ರಂಥಾಲಯ, ಸಪ್ತಾಹ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪಡೆದಿದ್ದಕ್ಕಾಗಿ ಭಗವಂತಪ್ಪ ತಾರಿಕೊಪ್ಪ, ಬೆಂಗಳೂರಿನಲ್ಲಿ ನಡೆದ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮದಲ್ಲಿ ರಾಜ್ಯ ಪ್ರಶಸ್ತಿ ಪಡೆದ ವಿಜಯ ಕುಮಾರ್ ಎಚ್.ಬಣಕಾರ, ಮಹಿಳಾ ಮತ್ತು ಮಕ್ಕಳ ಇಲಾಖೆ ಹಾಗೂ ಬಾಲ ಭವನ ಸೊಸೈಟಿ ಇವರುಗಳ ಸಹಯೋಗದಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಸ್ತ್ರೀಯ ಸಂಗೀತ ಸ್ಪರ್ಧೆಯಲ್ಲಿ ಕಲಾಶ್ರೀ ಪ್ರಶಸ್ತಿ ಪಡೆದಿದ್ದಕ್ಕಾಗಿ ಕೃಷ್ಣಪ್ರಿಯಾ ಆನಂದ ಬದಿ, ಎನ್.ಸಿ.ಸಿ ಕ್ಯಾಡೆಟ್ ವಿಭಾಗದಲ್ಲಿ ಉತ್ತಮ ಸಾಧನೆ ಮಾಡಿದ್ದಕ್ಕಾಗಿ ಹನುಮಂತರಾವ್ ಕುಲಕರ್ಣಿ ಅವರನ್ನು ಸನ್ಮಾನಿಸಲಾಯಿತು.
ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ವಿಜೇತರಾದ ಕ್ರೀಡಾಪಟುಗಳ ವಿವರ: ರಾಜ್ಯಮಟ್ಟದ ಅಥ್ಲೆಟಿಕ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಕ್ಕಾಗಿ ಆಶಿಫ್ ಶೇಖಸಾಬ ನದಾಫ್, ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಕ್ಕಾಗಿ ಶಾಹೀನ ಗುಲಾಂ ಸಾಬ ನದಾಫ್, ರಾಜ್ಯಮಟ್ಟದ ಯುವ ಸಂಸತ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಕ್ಕಾಗಿ ಮಹಮ್ಮದ ರಫೀಕ್ ಎನ್.ರೇವಡಿಗಾರ, ಅಂತಾರಾಷ್ಟ್ರೀಯ ಕುಸ್ತಿ ಸ್ಪರ್ಧೆಯಲ್ಲಿ ಪ್ರಶಸ್ತಿಗೆ ಭಾಜನರಾಗಿದ್ದಕ್ಕಾಗಿ ಮುತ್ತು ರಮೇಶ ಭಾವಿ, ರಾಜ್ಯಮಟ್ಟದ ಯುವಜನೋತ್ಸವ ಕಾರ್ಯಕ್ರಮದ ಚಿತ್ರಕಲಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ವಿನುತ ಅಕ್ಕಸಾಲಿಗ, ರಾಷ್ಟ್ರಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಕ್ಕಾಗಿ ನಿರೀಕ್ಷಿತಾ ಡೊಳ್ಳಿನ, 29ನೇ ರಾಷ್ಟ್ರೀಯ ರೋಡ್ ಸೈಕ್ಲಿಂಗ್ ಚಾಂಪಿಯನ್ ಶಿಪ್ನಲ್ಲಿ ಪ್ರಥಮ ಸ್ಥಾನ ಪಡೆದಿದ್ದಕ್ಕಾಗಿ ನಿಖಿಲರೆಡ್ಡಿ ತೇರಿನಗಡ್ಡಿ, ರಾಜ್ಯ ಮಟ್ಟದ ಸ್ಕೂಲ್ ಗೇಮ್ನಲ್ಲಿ ಪ್ರಥಮ ಸ್ಥಾನ ಪಡೆದಿದ್ದಕ್ಕಾಗಿ ಚಿನ್ಮಯ ಎಸ್.ಕಪ್ಪತನವರ ಅವರನ್ನು ಸನ್ಮಾನಿಸಲಾಯಿತು.
ಸಮಾರಂಭದಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ನಗರಾಬಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕಬರಸಾಬ ಬಬರ್ಚಿ, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ, ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ, ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷ ಕೆಂಚಪ್ಪನವರ, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಜನಪ್ರತಿನಿಧಿಗಳು, ಗಣ್ಯರುಗಳು, ಸಾರ್ವಜನಿಕರು, ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.