ವಿಶೇಷ ಚೇತನ ಮಕ್ಕಳಿಗೆ ಅರಿವು ಕಾರ್ಯಕ್ರಮ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ವಿದ್ಯಾರ್ಥಿಗಳಲ್ಲಿ ಕಂಡುಬರುವ ಕೆಲವು ನೂನ್ಯತೆಗಳನ್ನು ಪಾಲಕರು ಬಾಲ್ಯದಲ್ಲಿಯೇ ಗುರುತಿಸಿ ತಜ್ಞ ವೈದ್ಯರನ್ನು ಸಂಪರ್ಕಿಸಿ, ಚಿಕಿತ್ಸೆ ಕೊಡಿಸಿದಲ್ಲಿ ಮಕ್ಕಳು ಸುಧಾರಣೆಗೊಂಡು ಸಾಮಾನ್ಯ ಮಕ್ಕಳಾಗುವ ಸಾಧ್ಯತೆಯಿದೆ ಎಂದು ಗದಗ-ಬೆಟಗೇರಿ ಲಯನ್ಸ್ ಕ್ಲಬ್ ಅಧ್ಯಕ್ಷ ನಿತೀಶ್ ಸಾಲಿ ಹೇಳಿದರು.
ಅವರು ಗುರುವಾರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ಗದಗ-ಬೆಟಗೇರಿ ಲಯನ್ಸ್ ಕ್ಲಬ್‌ಗಳ ಸಂಯುಕ್ತ ಆಶ್ರಯದಲ್ಲಿ ಗದಗ ಒಕ್ಕಲಗೇರಿಯ ಸರ್ಕಾರಿ ಶಾಲೆಗಳಲ್ಲಿ ನಡೆದ ವಿಶೇಷ ಚೇತನ ಮಕ್ಕಳಿಗಾಗಿ ಪರಿಸರ ನಿರ್ಮಾಣ ಹಾಗೂ ಸಮನ್ವಯತೆ ಕುರಿತು ನಡೆದ ಅರಿವು ಸಮಾರಂಭದಲ್ಲಿ ಭಿತ್ತಿಪತ್ರ ಉದ್ಘಾಟಿಸಿ ಮಾತನಾಡಿದರು.
ವಿಶೇಷ ಚೇತನರು ಸಮಾಜದ ಮುಖ್ಯವಾಹಿನಿಗೆ ಬರಬೇಕು. ಅವರಿಗೆ ಪ್ರೋತ್ಸಾಹದ ಅಗತ್ಯವಿದೆ. ಸರ್ಕಾರದ ಸೌಲಭ್ಯಗಳೊಂದಿಗೆ ಸೂಕ್ತ ವಾತಾವರಣ ಅವಶ್ಯ. ಸಮುದಾಯವು ಈ ಮಕ್ಕಳ ಶ್ರೇಯೋಭಿವೃದ್ಧಿಗಾಗಿ ಕೈ ಜೋಡಿಸಬೇಕು ಎಂದರು.
ಸAಪನ್ಮೂಲ ವ್ಯಕ್ತಿ ಕವಿತಾ ಬೆಲೇರಿ ಮಾತನಾಡಿ, ವಿಶೇಷ ಮಕ್ಕಳು ವಿಶೇಷ ಪ್ರತಿಭೆಯುಳ್ಳವರು. ಅವರಿಗೆ ಪ್ರೋತ್ಸಾಹ ದೊರೆತಲ್ಲಿ ಅವರೂ ಸಾಧಿಸಬಲ್ಲರು. ಕಲಿಕಾ ಪೂರಕ ವಾತಾವರಣ, ಉತ್ತಮ ಪರಿಸರ ನಿರ್ಮಾಣ ಕಾರ್ಯ ನಡೆಯಬೇಕು. ಅಂದಾಗ ಈ ಮಕ್ಕಳು ಕಲಿಕೆಯಲ್ಲಿ ಪ್ರಗತಿ ಕಂಡು ಸಾಧಿಸಬಲ್ಲರು ಎಂದರು.
ಶಾಲಾ ಮುಖ್ಯೋಪಾಧ್ಯಾಯ ವಾಯ್.ಹೆಚ್. ಹನುಮಂತಗೌಡ್ರ ಮಾತನಾಡಿ, ಸಂಘ-ಸಂಸ್ಥೆಗಳು ಸರ್ಕಾರಿ ಶಾಲೆಗಳತ್ತ ಬಂದು ವಿಶೇಷ ಚೇತನರ ಬಗೆಗೆ ಸಮುದಾಯದಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ ನೀಡುತ್ತಿರುವುದು ಹೆಮ್ಮೆಯ ಸಂಗತಿ ಎಂದರು.
ಗದಗ-ಬೆಟಗೇರಿ ಲಯನ್ಸ ಕ್ಲಬ್‌ನ ಸದಸ್ಯರು ಹಾಗೂ ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.

Advertisement

Spread the love

LEAVE A REPLY

Please enter your comment!
Please enter your name here