ಅರಮನೆಯಲ್ಲಿ ಕಳೆಗಟ್ಟಿದ ಆಯುಧ ಪೂಜಾ ಸಂಭ್ರಮ!

0
Spread the love

ಮೈಸೂರು:-ನವರಾತ್ರಿಯ 9ನೇ ದಿನ ಇಂದು ಎಲ್ಲೆಡೆ ಆಯುಧ ಪೂಜೆ ಸಂಭ್ರಮ ಮನೆ ಮಾಡಿದೆ. ಅದರಂತೆ ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ಕಾರ್ಯಕ್ರಮ ಆರಂಭವಾಗಿದೆ. ಬೆಳಗ್ಗೆ 6 ಗಂಟೆಗೆ ಚಾಮುಂಡಿ ತೊಟ್ಟಿಯಲ್ಲಿ ಚಂಡಿ ಹೋಮ ನೆರವೇರಿತು.

Advertisement

ಬೆಳಗ್ಗೆ 6.40ರಿಂದ 7.10ರೊಳಗೆ ಖಾಸಗಿ ಆಯುಧಗಳನ್ನು ಪೂಜೆ ಮಾಡಲಾಗಿದೆ. ಬಳಿಕ ಖಾಸಗಿ ಆಯುಧಗಳನ್ನು ಆನೆ ಬಾಗಿಲು ಮೂಲಕ ಕೋಡಿ ಸೋಮೇಶ್ವರ ದೇವಾಲಯಕ್ಕೆ ತೆಗೆದುಕೊಂಡು ಹೋಗಲಾಗುತ್ತದೆ. 7.30ರಿಂದ 8 ಗಂಟೆಯೊಳಗೆ ದೇಗುಲದಿಂದ ಖಾಸಗಿ ಆಯುಧಗಳನ್ನ ಆನೆ ಬಾಗಿಲು ಮುಖಾಂತರ ಕಲ್ಯಾಣ ಮಂಟಪಕ್ಕೆ ಆಗಮಿಸುತ್ತವೆ.

9.05ಕ್ಕೆ ಚಂಡಿ ಹೋಮ ಪೂರ್ಣಾಹುತಿ, 11.45ಕ್ಕೆ ಪಟ್ಟದ ಆನೆ, ಕುದುರೆ, ಹಸು ಆನೆ ಬಾಗಿಲಿಗೆ ಆಗಮಿಸುತ್ತವೆ. ಮಧ್ಯಾಹ್ನ 12.20ರಿಂದ 12.45ರೊಳಗೆ ಅರಮನೆ ಕಲ್ಯಾಣ ಮಂಟಪದಲ್ಲಿ ಆಯುಧ ಪೂಜೆ ನೆರವೇರಲಿದೆ. ಸಂಜೆ ಖಾಸಗಿ ದರ್ಬಾರ್ ಬಳಿಕ ಸಿಂಹ ಮುಖ ವಿಸರ್ಜನೆ ನೆರವೇರುತ್ತದೆ.

ನಂತರ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಮನೆ ದೇವರ ದರ್ಶನ ಮಾಡುತ್ತಾರೆ. ಬಳಿಕ ಮೈಸೂರು ಅರಮನೆಯಲ್ಲಿ ದಫ್ತಾರ್ ಪೂಜೆ ನೆರವೇರುತ್ತದೆ.


Spread the love

LEAVE A REPLY

Please enter your comment!
Please enter your name here