ವಿಜಯಸಾಕ್ಷಿ ಸುದ್ದಿ, ಧಾರವಾಡ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆಯ ಸಹಯೋಗದಲ್ಲಿ ಆಯುಷ್ ಪಾನೀಯ ಪರಿಚಯ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಆಯುಷ್ ನಿರ್ದೇಶನಾಲಯದ ಮಾರ್ಗಸೂಚಿಗಳನುಸಾರ ರಾಜ್ಯಾದ್ಯಂತ ಇತ್ತೀಚಿನ ದಿನಗಳಲ್ಲಿ ತಾಪಮಾನವು ದಾಖಲೆ ಮಟ್ಟದಲ್ಲಿ ಏರಿಕೆ ಆಗುತ್ತಿದ್ದು, ಈ ಬೇಸಿಗೆಯ ಸುಡು ಬಿಸಿಲಿನ ದಿನಗಳಲ್ಲಿ ಸಾರ್ವಜನಿಕರಿಗೆ ಆರೋಗ್ಯಕರವಾದ ಪಾನೀಯಗಳ ಸೇವನೆ ಬಗ್ಗೆ ಜಾಗೃತಿ ಮೂಡಿಸಲು ಹಾಗೂ ಆಯುಷ್ ಪದ್ಧತಿಗಳಲ್ಲಿ ಪಾನೀಯಗಳ ಮಹತ್ವವನ್ನು ಪರಿಚಯಿಸುವ ದೃಷ್ಟಿಯಿಂದ ಆಯುಷ್ ಪಾನೀಯ ಪರಿಚಯ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿಗಳ ಕಾರ್ಯಾಲಯ, ಚುನಾವಣಾ ಕೊಠಡಿಯಲ್ಲಿನ ಲೋಕಸಭಾ ಚುನಾವಣಾ ಕರ್ತವ್ಯ ನಿರತ ಅಧಿಕಾರಿ, ಸಿಬ್ಬಂದಿಯವರಿಗೆ ಮತ್ತು ಜಿಲ್ಲಾಧಿಕಾರಿಗಳ ಕಛೇರಿಗೆ ಆಗಮಿಸುವ ಸಾರ್ವಜನಿಕರಿಗಾಗಿ ಹಮ್ಮಿಕೊಂಡು, ಉಚಿತವಾಗಿ ಚಿಂಚಾ ಪಾನಕವನ್ನು ವಿತರಿಸಲಾಯಿತು.
ಇದರಿಂದ ವ್ಯಕ್ತಿಯ ಜೀರ್ಣಕ್ರಿಯೆ ಉತ್ತಮಗೊಳ್ಳುತ್ತದೆ, ಮಲಬದ್ಧತೆಯನ್ನು ನಿವಾರಿಸುವುದು, ಬಾಯಾರಿಕೆಯನ್ನು ನೀಗಿಸುವುದು ಸೇರಿದಂತೆ ಅನೇಕ ಉಪಯೋಗಗಳಿವೆ ಎಂದು ಜಿಲ್ಲಾ ಆಯುಷ್ ಅಧಿಕಾರಿ ಡಾ. ಗಣೇಶ ಕಬಾಡೆ ತಿಳಿಸಿದರು.