ಮಂಡ್ಯ: ಮಂಡ್ಯಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ. ಮಂಡ್ಯ ನಗರದ ಖಾಸಗಿ ಸಮುದಾಯ ಭವನದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ನಡೆಯುತ್ತಿರುವ ಪತ್ರಕರ್ತರ ಅಂತರ್ ಜಿಲ್ಲಾ ಸಮ್ಮೇಳನದಲ್ಲಿ ಭಾಗಿಯಾಗಲಿದ್ದಾರೆ.
Advertisement
ಮಂಡ್ಯಕ್ಕೆ ಸಿಎಂ ಸಿದ್ದರಾಮಯ್ಯ ಆಗಮನ ಹಿನ್ನಲೆ ತರಾತುರಿಯಲ್ಲಿ ಗುಂಡಿ ಮುಚ್ಚುವ ಕಾರ್ಯ ಮಾಡುತ್ತಿದ್ದಾರೆ. ಇಷ್ಟು ದಿನ ಜನರು ಬಿದ್ದು ಎದ್ದರು ಕ್ಯಾರೆ ಎನ್ನದ ಜಿಲ್ಲಾಡಳಿತ ಇದೀಗ ಬರ್ತಾವ್ರೆ ಅಂದಿದ್ದೆ ತಡ ಗುಂಡಿ ಮುಚ್ಚುವ ಕಾರ್ಯ ಮಾಡುತ್ತಿದ್ದಾರೆ.
ಜಿಲ್ಲಾಡಳಿತದ ವಿರುದ್ದ ಸಾರ್ವಜನಿಕರ ಆಕ್ರೋಶ ವ್ಯಕ್ತವಾಗುತ್ತಿದ್ದು, ಸಿಎಂ ಸಂಚರಿಸುವ ರಸ್ತೆಯಲ್ಲಿ ಮಾತ್ರ ಗುಂಡು ಮುಚ್ಚುತ್ತಿರುವ ಪಿಡಬ್ಲೂಡಿ ಇಲಾಖೆ.
ಕಾರ್ಮಿಕರಿಗೆ ಕನಿಷ್ಠ ಸುರಕ್ಷತಾ ಕ್ರಮವನ್ನು ತೆಗೆದುಕೊಳ್ಳದೆ ಕೆಲಸ ಮಾಡ್ತಿರುವ PWD ಇಲಾಖೆ, ಆದ್ದರಿಂದ ಜಿಲ್ಲಾಡಳಿತದ ವಿರುದ್ದ ಸಾರ್ವಜನಿಕರ ಆಕ್ರೋಶ ವ್ಯಕ್ತವಾಗುತ್ತಿದೆ.