HomeKarnataka Newsಬಕ್ರೀದ್ ಹಿನ್ನೆಲೆ: ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧ; ಬದಲಿ ಮಾರ್ಗಗಳು ಹೀಗಿವೆ

ಬಕ್ರೀದ್ ಹಿನ್ನೆಲೆ: ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧ; ಬದಲಿ ಮಾರ್ಗಗಳು ಹೀಗಿವೆ

For Dai;y Updates Join Our whatsapp Group

Spread the love

ಬೆಂಗಳೂರು:- ಇಂದು ಕರ್ನಾಟಕ ಸೇರಿ ದೇಶಾದ್ಯಂತ ಬಕ್ರೀದ್ ಹಬ್ಬದ ಸಂಭ್ರಮ ಜೋರಾಗಿದೆ. ಬಕ್ರೀದ್‌ ಹಬ್ಬದ ಪ್ರಯುಕ್ತ ಸಿಲಿಕಾನ್ ಸಿಟಿ ಬೆಂಗಳೂರಿನ ಚಾಮರಾಜಪೇಟೆ ಬಿಬಿಎಂಪಿ ಆಟದ ಮೈದಾನ ಹಾಗೂ ಬಿ.ಬಿ. ಜಂಕ್ಷನ್‌ ಬಳಿಯ ಮಸೀದಿಯಲ್ಲಿ ಇಂದು ಸಾಮೂಹಿಕ ಪ್ರಾರ್ಥನೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮೈಸೂರು ರಸ್ತೆಯಲ್ಲಿ ಬೆಳಗ್ಗೆ 8 ಗಂಟೆಯಿಂದ ಪ್ರಾರ್ಥನೆ ಮುಗಿಯುವವರೆಗೆ ತಾತ್ಕಾಲಿಕವಾಗಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ.

ಪುಲಕೇಶಿನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಮಿಲ್ಲರ್ಸ್ ರಸ್ತೆಯಲ್ಲಿರುವ ಖುದ್ದುಸಾಬ್ ಈದ್ಗಾ ಮೈದಾನದಲ್ಲಿ (ಓಲ್ಡ್ ಹಜ್ ಕ್ಯಾಂಪ್) ಬಕ್ರೀದ್ ಹಬ್ಬದ ಪ್ರಾರ್ಥನೆ ಸಲ್ಲಿಸುವ ಪ್ರಯುಕ್ತ ಸಾರ್ವಜನಿಕರ ಮತ್ತು ವಾಹನ ಸವಾರರ ಹಿತದೃಷ್ಟಿಯಿಂದ ಈ ಕೆಳಕಂಡಂತೆ ಬೆಳಗ್ಗೆ 07 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಸಂಚಾರ ಮಾರ್ಪಾಡು ಮಾಡಲಾಗಿದೆ.

ವಾಹನ ಸಂಚಾರ ನಿರ್ಬಂಧಿಸಿರುವ ರಸ್ತೆಗಳು:

* ಮಿಲ್ಲರ್ ರಸ್ತೆ ಕಂಟೋನ್ಸೆಂಟ್ ಅಂಡರ್ ಬ್ರಿಡ್ಜ್​ನಿಂದ ಹೇನ್ಸ್ ರಸ್ತೆ ಜಂಕ್ಷನ್​ವರೆಗೆ ಎರಡು ಬದಿಯ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.

* ಹೇನ್ಸ್ ರಸ್ತೆ ಜಂಕ್ಷನ್‌ನಿಂದ ಮಿಲ್ಲರ್ ರಸ್ತೆ ಕಂಟೋನ್ಸೆಂಟ್ ರೈಲ್ವೆ ಅಂಡರ್ ಬ್ರಿಡ್ಜ್​ ವರೆಗೆ ಎರಡು ಬದಿಯ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.

* ನಂದಿದುರ್ಗ ರಸ್ತೆ – ಬೆನ್ಸನ್ ಕ್ರಾಸ್ ರಸ್ತೆ ಜಂಕ್ಷನ್‌ನಿಂದ ಮಿಲ್ಲರ್ಸ್ ರಸ್ತೆ ಜಂಕ್ಷನ್‌ವರೆಗೆ (ಓಲ್ಡ್ ಹಜ್ ಕ್ಯಾಂಪ್) ಎರಡು ಬದಿಯ ಸಂಚಾರ ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.

ಪರ್ಯಾಯ ಮಾರ್ಗಗಳು:

* ಮಿಲ್ಲರ್ ರಸ್ತೆ ಕಂಟೋನ್ಸೆಂಟ್ ರೈಲ್ವೆ ಅಂಡರ್ ಬ್ರಿಡ್ಜ್ ಕಡೆಯಿಂದ ಪುಲಕೇಶಿನಗರ ಕಡೆಗೆ ಸಂಚರಿಸುವ ವಾಹನ ಚಾಲಕರು ಅಥವಾ ಸವಾರರು, ಮಿಲ್ಲರ್ಸ್ ರಸ್ತೆಯಲ್ಲಿ ಬಲ ತಿರುವು ಪಡೆದು ಕಂಟೋನ್ಸೆಂಟ್ ರೈಲ್ವೆ ನಿಲ್ದಾಣದ ಮುಂಭಾಗ ಕಂಟೋನ್ಸೆಂಟ್ ರಸ್ತೆಯಲ್ಲಿ ನೇರವಾಗಿ ಸಾಗಿ ಬಂಬೂಬಜಾರ್ ಜಂಕ್ಷನ್ ತಲುಪಿ ನಂತರ ನೇತಾಜಿ ರಸ್ತೆ ಮುಖಾಂತರ ಪುಲಕೇಶಿನಗರ ಕಡೆಗೆ ಸಂಚರಿಸಬಹುದು.

* ಹೇನ್ಸ್ ರಸ್ತೆ ಜಂಕ್ಷನ್‌ನಿಂದ ಜಯಮಹಲ್ ರಸ್ತೆ ಕಡೆಗೆ ಸಂಚರಿಸುವವರು ಹೇನ್ಸ್ ರಸ್ತೆ ಜಂಕ್ಷನ್‌ನಿಂದ ಹೇನ್ಸ್ ರಸ್ತೆಯಲ್ಲಿ ನೇರವಾಗಿ ಸಾಗಿ ಧನಕೋಟಿ ರಸ್ತೆಯಲ್ಲಿ ಬಲ ತಿರುವು ಪಡೆದು ಎ.ಎಂ ರಸ್ತೆ ಮುಖಾಂತರ ಬಂಬೂ ಬಜಾರ್ ತಲುಪಿ ಕಂಟೋನ್ಸೆಂಟ್ ರಸ್ತೆಯಲ್ಲಿ ನೇರವಾಗಿ ಸಾಗಿ ಕ್ರೀನ್ಸ್ ರಸ್ತೆ – ತಿಮ್ಮಯ್ಯ ರಸ್ತೆ ಮುಖಾಂತರ ಜಯಮಹಲ್ ರಸ್ತೆ ಕಡೆಗೆ ಸಂಚರಿಸಬಹುದು.

* ನಂದಿದುರ್ಗ ರಸ್ತೆ ಕಡೆಯಿಂದ ಪುಲಕೇಶಿನಗರ ಕಡೆಗೆ ಸಂಚರಿಸುವವರು ನಂದಿದುರ್ಗ ರಸ್ತೆ ಬೆನ್ಸನ್ ಕ್ರಾಸ್ ರಸ್ತೆಯಲ್ಲಿ ಎಡ ತಿರುವು ಪಡೆದು ಬೆನ್ಸನ್ ಕ್ರಾಸ್ ರಸ್ತೆಯಲ್ಲಿ ನೇರವಾಗಿ ಸಾಗಿ ಬೋರ್ ಬಂಕ್ ರಸ್ತೆಯಲ್ಲಿ ಎಡತಿರುವು ಪಡೆದು ನೇರವಾಗಿ ಸಾಗಿ ಪಾಟರಿ ಜಂಕ್ಷನ್ ತಲುಪಿ ಬಲ ತಿರುವು ಪಡೆದು ಪುಲಕೇಶಿನಗರ ಕಡೆಗೆ ಸಂಚರಿಸುವುದು.

ನಾಗವಾರ ಜಂಕ್ಷನ್‌ನಿಂದ ಪಾಟರಿ ಸರ್ಕಲ್​ನವರೆಗೆ ಬಕ್ರೀದ್ ಹಬ್ಬದ ಪ್ರಾರ್ಥನೆ ಹಿನ್ನೆಲೆ ಸಾರ್ವಜನಿಕರ ಮತ್ತು ವಾಹನ ಸವಾರರ ಹಿತದೃಷ್ಟಿಯಿಂದ ಈ ಕೆಳಕಂಡಂತೆ ಬೆಳಗ್ಗೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಸಂಚಾರ ಮಾರ್ಪಾಡು ಮಾಡಲಾಗಿದೆ.

ಪರ್ಯಾಯ ಮಾರ್ಗ:
ನಾಗವಾರ ಜಂಕ್ಷನ್‌ನಿಂದ ಶಿವಾಜಿನಗರಕ್ಕೆ ಹೋಗುವ ವಾಹನ ಸವಾರರು ನಾಗವಾರ ಜಂಕ್ಷನ್‌ನಲ್ಲಿ ಎಡ ತಿರುವು ಪಡೆದು ಹೆಣ್ಣೂರು ಜಂಕ್ಷನ್ ರಸ್ತೆಯಲ್ಲಿ ಬಲ ತಿರುವು ಪಡೆದುಕೊಂಡು ಕಾಚರಕನಹಳ್ಳಿ ರಸ್ತೆ, ಚಂದ್ರಿಕ ಜಂಕ್ಷನ್ ಎಡ ತಿರುವು ಲಿಂಗರಾಜಪುರಂ ಪ್ರೈ ಓವರ್, ಪುಲಕೇಶಿನಗರ ಸಂಚಾರ ಪೊಲೀಸ್ ಠಾಣೆ ರಾಬರ್ಟ್‌ನ್ ರಸ್ತೆ ಜಂಕ್ಷನ್‌ನಲ್ಲಿ ಬಲ ತಿರುವು ಪಡೆದುಕೊಂಡು ಹೇನ್ಸ್ ರಸ್ತೆ ಮೂಲಕ ಶಿವಾಜಿನಗರ ತಲುಪಬಹುದಾಗಿದೆ.

ಶಿವಾಜಿನಗರ ಕಡೆಯಿಂದ ನಾಗವಾರ ಜಂಕ್ಷನ್ ಕಡೆಗೆ ಬರುವ ವಾಹನ ಸವಾರರು ಸ್ಪೆನ್ಸ‌ರ್ ರಸ್ತೆಯಲ್ಲಿ ಕಡ್ಡಾಯವಾಗಿ ಬಲ ತಿರುವು ಪಡೆದುಕೊಂಡು ಸ್ಪೆನ್ಸರ್ ರಸ್ತೆ ಮೂಲಕ ಕೋಲ್ಸ್ ರಸ್ತೆ ತಲುಪಿ ವೀಲರ್ಸ್ ರಸ್ತೆ ಮೂಲಕ ಹೆಣ್ಣೂರು, ಬಾಣಸವಾಡಿ, ನಾಗವಾರ ಜಂಕ್ಷನ್ ಕಡೆಗೆ ಸಂಚರಿಸಬಹುದಾಗಿದೆ.

ಆರ್.ಟಿ. ನಗರದಿಂದ ಕಾವಲ್ ಬೈರಸಂದ್ರ ಮೂಲಕ ನಾಗವಾರ ಜಂಕ್ಷನ್ ಕಡೆಗೆ ಬರುವ ವಾಹನಗಳು ಪುಷ್ಪಾಂಜಲಿ ಟಾಕೀಸ್ ಬಳಿ ಎಡ ತಿರುವು ಪಡೆದು ವೀರಣ್ಣ ಪಾಳ್ಯ ಜಂಕ್ಷನ್ ಕಡೆಗೆ ಬಲ ತಿರುವು ಪಡೆದು ನಾಗವಾರ ಜಂಕ್ಷನ್ ಕಡೆಗೆ ಸಂಚರಿಸಬಹುದಾಗಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!