HomeKarnataka Newsಬಂಡೀಪುರ, ನಾಗರಹೊಳೆ ಜಂಗಲ್ ಸಫಾರಿಗೆ ಮತ್ತೆ ಗ್ರೀನ್ ಸಿಗ್ನಲ್: ರಾಜ್ಯ ಸರ್ಕಾರದಿಂದ ಪೂರ್ಣ ಪ್ರಮಾಣದಲ್ಲಿ ಪುನರಾರಂಭ

ಬಂಡೀಪುರ, ನಾಗರಹೊಳೆ ಜಂಗಲ್ ಸಫಾರಿಗೆ ಮತ್ತೆ ಗ್ರೀನ್ ಸಿಗ್ನಲ್: ರಾಜ್ಯ ಸರ್ಕಾರದಿಂದ ಪೂರ್ಣ ಪ್ರಮಾಣದಲ್ಲಿ ಪುನರಾರಂಭ

For Dai;y Updates Join Our whatsapp Group

ಬೆಂಗಳೂರು: ತಜ್ಞರು ಹಾಗೂ ಅಧಿಕಾರಿಗಳ ತಾಂತ್ರಿಕ ಸಮಿತಿಯ ಶಿಫಾರಸಿನ ಮೇರೆಗೆ ಬಂಡೀಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಜಂಗಲ್ ಸಫಾರಿ (ಉದ್ಯಾನ ಪ್ರವಾಸ)ಯನ್ನು ಪೂರ್ಣ ಪ್ರಮಾಣದಲ್ಲಿ ಪುನರಾರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಈ ಕುರಿತು ತಾಂತ್ರಿಕ ಸಮಿತಿಯ ವರದಿಯನ್ನು ಸರ್ಕಾರ ಅಂಗೀಕರಿಸಿದ್ದು, ವೈಜ್ಞಾನಿಕ ಮೌಲ್ಯಮಾಪನದ ಆಧಾರದ ಮೇಲೆ ಪರಿಣಾಮಕಾರಿ ಸಾಗಣೆ ಸಾಮರ್ಥ್ಯ (Carrying Capacity) ಪರಿಶೀಲಿಸಿ ಜಂಗಲ್ ಸಫಾರಿ ಪುನರಾರಂಭಕ್ಕೆ ಹಸಿರು ನಿಶಾನೆ ನೀಡಲಾಗಿದೆ.

ಸಮಿತಿಯ ಶಿಫಾರಸಿನಂತೆ ಪರಿಸರಕ್ಕೆ ಯಾವುದೇ ಹಾನಿಯಾಗದಂತೆ ನಿಯಂತ್ರಿತ ರೀತಿಯಲ್ಲಿ ಜಂಗಲ್ ಸಫಾರಿ ನಡೆಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಕರ್ನಾಟಕವು ಪರಿಸರ ಪ್ರವಾಸೋದ್ಯಮ ಕ್ಷೇತ್ರದಲ್ಲಿ ದೇಶದಲ್ಲೇ ಮುಂಚೂಣಿಯಲ್ಲಿದ್ದು, ಸುಸ್ಥಿರ ಪ್ರವಾಸೋದ್ಯಮ ಮಾದರಿಯನ್ನು ಅನುಸರಿಸುತ್ತಿದೆ. ಜಂಗಲ್ ಸಫಾರಿ ಪುನರಾರಂಭದಿಂದ ಸ್ಥಳೀಯ ಜನರಿಗೆ ಉದ್ಯೋಗ ಹಾಗೂ ಜೀವನೋಪಾಯದ ಹೆಚ್ಚಿನ ಅವಕಾಶಗಳು ಸೃಷ್ಟಿಯಾಗಲಿದ್ದು, ಸ್ಥಳೀಯ ಆರ್ಥಿಕತೆಯ ಬೆಳವಣಿಗೆಗೂ ಉತ್ತೇಜನ ದೊರೆಯಲಿದೆ ಎಂದು ಮುಖ್ಯಮಂತ್ರಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ಪರಿಸರ ವ್ಯವಸ್ಥೆಯ ಸಮಗ್ರತೆಯನ್ನು ಕಾಪಾಡುವ ಜೊತೆಗೆ ವನ್ಯಜೀವಿ ಸಂರಕ್ಷಣೆ, ಸ್ಥಳೀಯ ಸಮುದಾಯಗಳ ಜೀವನೋಪಾಯ ಹಾಗೂ ಪ್ರವಾಸಿಗರಿಗೆ ಉತ್ತಮ ಅನುಭವ ಒದಗಿಸುವ ಪರಿಸರ ಸ್ನೇಹಿ ಪ್ರವಾಸೋದ್ಯಮಕ್ಕೆ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಲಾಗಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img