ಬೆಂಗಳೂರು:- ಪೇಪರ್ ಗೋದಾಮಿಗೆ ಬೆಂಕಿ ತಗುಲಿ ಭಾರೀ ಅನಾಹುತ ಸಂಭವಿಸಿರುವ ಘಟನೆ ಗೊಲ್ಲರಹಟ್ಟಿ ಸಮೀಪದಲ್ಲಿ ಜರುಗಿದೆ.
ಏಕಾಏಕಿ ಗೋದಾಮಿಗೆ ಬೆಂಕಿ ತಗುಲಿದ ಪರಿಣಾಮ, ಪೇಪರ್, ರಟ್ಟು ಸುಟ್ಟು ಭಸ್ಮವಾಗಿದೆ. ಬೆಂಕಿ ಹೊತ್ತಿಕೊಳ್ಳುತಿದ್ದಂತೆ ಕಾರ್ಮಿಕರು ಹೊರಗಡೆ ಓಡಿ ಬಂದಿದ್ದಾರೆ.
ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಧಾವಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.



