ನವದೆಹಲಿ:- UP ಸಿಎಂ ಯೋಗಿ ಆದಿತ್ಯನಾಥ್ಗೆ ಕೊಲೆ ಬೆದರಿಕೆ ಹಾಕಿದ್ದ ಬಾಂಗ್ಲಾ ವ್ಯಕ್ತಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
Advertisement
ಬಾಂಗ್ಲಾದೇಶದವರಾದ ಶೇಖ್ ಅತಾಲ್ ಬಂಧಿತ ಆರೋಪಿ. ಕೊಲೆ ಬೆದರಿಕೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಇದಾದ ನಂತರ, ಸೆಕ್ಟರ್ 39 ನೋಯ್ಡಾ ಪೊಲೀಸರು ಕ್ರಮ ಕೈಗೊಂಡು ಆ ವ್ಯಕ್ತಿಯನ್ನು ಕಸ್ಟಡಿಗೆ ತೆಗೆದುಕೊಂಡಿದ್ದಾರೆ.
ಆತನಿಂದ ಆಯುಧವನ್ನೂ ಪೊಲೀಸರು ವಶಪಡಿಸಿಕೊಂಡಿದ್ದಾರೆ. ವೈರಲ್ ಆಗಿರುವ ವಿಡಿಯೋದಲ್ಲಿ ಆರೋಪಿಯು ಯೋಗಿ ಆದಿತ್ಯನಾಥ್ನನ್ನು ಕೊಂಲೆ ಮಾಡುವ ಬಗ್ಗೆ ಮಾತನಾಡುತ್ತಿರುವುದು ಮತ್ತು ಉದ್ರೇಕಕಾರಿ ಹೇಳಿಕೆಗಳನ್ನು ನೀಡಿರುವುದು ಕಂಡುಬಂದಿದೆ.
40 ವರ್ಷದ ಶೇಖ್ ಅತಾಲ್ ಅವರ ಬಳಿ ಪಿಸ್ತೂಲ್, ಕಾರ್ಟ್ರಿಡ್ಜ್ಗಳು, ಆಕ್ಷೇಪಾರ್ಹ ದಾಖಲೆಗಳು ಮತ್ತು ಮೊಬೈಲ್ ಫೋನ್ ಪತ್ತೆಯಾಗಿದೆ. ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.