HomeSports Newsಭಾರತದಲ್ಲಿ ಪಂದ್ಯ ಆಡದಿದ್ದರೆ ವಿಶ್ವಕಪ್ʼನಿಂದ ಬಾಂಗ್ಲಾ ಔಟ್: ICC ವಾರ್ನಿಂಗ್

ಭಾರತದಲ್ಲಿ ಪಂದ್ಯ ಆಡದಿದ್ದರೆ ವಿಶ್ವಕಪ್ʼನಿಂದ ಬಾಂಗ್ಲಾ ಔಟ್: ICC ವಾರ್ನಿಂಗ್

For Dai;y Updates Join Our whatsapp Group

Spread the love

2026ರ ಟಿ20 ವಿಶ್ವಕಪ್ ಪಂದ್ಯಗಳನ್ನು ಭಾರತದಲ್ಲಿ ಆಡಲು ಬಾರದಿರುವುದಾಗಿ ಪಟ್ಟು ಹಿಡಿದಿರುವ ಬಾಂಗ್ಲಾದೇಶ ಕ್ರಿಕೆಟ್ ತಂಡಕ್ಕೆ ಐಸಿಸಿ ಕಠಿಣ ಎಚ್ಚರಿಕೆ ನೀಡಿದೆ. ಭಾರತದಲ್ಲಿ ಪಂದ್ಯ ಆಡದಿದ್ದರೆ, ವಿಶ್ವಕಪ್ ಟೂರ್ನಿಯಿಂದಲೇ ಹೊರಗಿಡಲಾಗುತ್ತದೆ ಎಂದು ಐಸಿಸಿ ತಿಳಿಸಿದೆ.

ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ತನ್ನ ನಿಲುವು ಬದಲಿಸಿಕೊಳ್ಳಲು ಜನವರಿ 21 ರವರೆಗೆ ಐಸಿಸಿ ಗಡುವು ನೀಡಿದೆ. ನಿಗದಿತ ಅವಧಿಯೊಳಗೆ ಬಾಂಗ್ಲಾ ಭಾರತಕ್ಕೆ ಬರಲು ಒಪ್ಪದಿದ್ದರೆ, ಪುರುಷರ ಟಿ20 ರ್ಯಾಂಕಿಂಗ್ ಆಧಾರದಲ್ಲಿ ಬೇರೊಂದು ಯುರೋಪಿಯನ್ ತಂಡಕ್ಕೆ ಅವಕಾಶ ನೀಡಲಾಗುತ್ತದೆ ಎಂದು ಐಸಿಸಿ ಎಚ್ಚರಿಕೆ ನೀಡಿದೆ.

ಐಪಿಎಲ್‌ನಿಂದ ಕ್ರಿಕೆಟಿಗ ಮುಸ್ತಾಫಿಜುರ್ ರೆಹಮಾನ್ ಅವರನ್ನು ಹೊರಗಿಟ್ಟ ಬಳಿಕ ಬಾಂಗ್ಲಾದೇಶ ಈ ನಿರ್ಧಾರ ತೆಗೆದುಕೊಂಡಿದೆ ಎನ್ನಲಾಗಿದೆ. ಭದ್ರತಾ ಕಾರಣಗಳನ್ನು ಉಲ್ಲೇಖಿಸಿ, ತನ್ನ ಪಾಲಿನ ಪಂದ್ಯಗಳನ್ನು ಶ್ರೀಲಂಕಾಗೆ ಸ್ಥಳಾಂತರಿಸುವಂತೆ ಬಿಸಿಬಿ ಒತ್ತಾಯಿಸಿದೆ.

ಅದಕ್ಕಾಗಿ ಐರ್ಲೆಂಡ್ ವಿರುದ್ಧದ ಲೀಗ್ ಪಂದ್ಯಗಳ ಸ್ಥಳ ಬದಲಾವಣೆಯನ್ನೂ ಬಾಂಗ್ಲಾದೇಶ ಕೇಳಿಕೊಂಡಿದೆ. ಆದರೆ ಭಾರತದಲ್ಲಿ ಆಡುವ ಇತರ ಯಾವುದೇ ತಂಡಗಳು ಭದ್ರತಾ ವಿಚಾರದಲ್ಲಿ ಯಾವುದೇ ಆತಂಕ ವ್ಯಕ್ತಪಡಿಸಿಲ್ಲ ಎಂದು ಐಸಿಸಿ ಸ್ಪಷ್ಟಪಡಿಸಿದೆ.

ಬಿಸಿಬಿ ಮತ್ತು ಐಸಿಸಿ ನಡುವಿನ ವಿವಾದ ಈಗ ಮೂರನೇ ವಾರಕ್ಕೆ ತಲುಪಿದೆ. ಐಸಿಸಿ ಟಿ20 ವಿಶ್ವಕಪ್ 2026 ಫೆಬ್ರವರಿ 7 ರಂದು ಪಾಕಿಸ್ತಾನ ಹಾಗೂ ನೆದರ್ಲೆಂಡ್ ನಡುವಿನ ಪಂದ್ಯದಿಂದ ಆರಂಭವಾಗಲಿದೆ. ಬಾಂಗ್ಲಾದೇಶ ನಿರಾಕರಣೆ ಮುಂದುವರಿಸಿದರೆ, ಬೇರೊಂದು ತಂಡಕ್ಕೆ ಅವಕಾಶ ನೀಡುವ ಉದ್ದೇಶದಿಂದ ಜನವರಿ 21 ರವರೆಗೆ ಐಸಿಸಿ ಅಂತಿಮ ಗಡುವು ನೀಡಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!