ಬೆಳಗಾವಿ:- ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ ನೀಡಿದ್ದಾರೆ.
ಪರಿಷತ್ನಲ್ಲಿ ಮಾತನಾಡಿದ ಅವರು, ಬಹು ಅಂಗಾಂಗ, ಕಿಡ್ನಿ ವೈಫಲ್ಯದಿಂದ ಬಾಣಂತಿಯರು ಸಾವನ್ನಪ್ಪುತ್ತಿದ್ದಾರೆ. ನ.11ರಂದು ಬಳ್ಳಾರಿ ಆಸ್ಪತ್ರೆಯಲ್ಲಿ ತಾಯಂದಿರ ಸಾವು ವರದಿಯಾಗಿದೆ. 34 ಸಿಸೇರಿಯನ್ ಆಪರೇಷನ್ನಲ್ಲಿ 7 ಪ್ರಕರಣಗಳಲ್ಲಿ ತೊಂದರೆ ಆಗಿದೆ. ಮೂತ್ರಪಿಂಡ ತೊಂದರೆ, ಬಹು ಅಂಗಾಂಗ ವೈಫಲ್ಯತೆದಿಂದ 7 ಪ್ರಕರಣಗಳಲ್ಲಿ 5 ಬಾಣಂತಿಯರು ಸಾವಿಗೀಡಾಗಿದ್ದಾರೆ.
2 ಬಾಣಂತಿಯರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಿಂಗರ್ ಲ್ಯಾಕ್ವೆಟ್ ದ್ರಾವಣ ಮಾದರಿ ಪರೀಕ್ಷೆಯಲ್ಲಿ ನಿರ್ಲಕ್ಷ್ಯತೆ ತೋರಿರುವ ಔಷಧಿ ನಿಯಂತ್ರಕರಾದ ಡಾ.ಉಮೇಶ್ರನ್ನು ಈಗಾಗಲೇ ಅಮಾನತು ಮಾಡಲಾಗಿದೆ ಎಂದು ತಿಳಿಸಿದರು.
ಸಂತ್ರಸ್ತ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ. ಡ್ರಗ್ ಕಂಪನಿ ವಿರುದ್ಧ ತನಿಖೆ ನಡೆಸಿ ಕ್ರಮಕೈಗೊಳ್ಳಬೇಕು ಎಂದು ಡ್ರಗ್ ಕಂಟ್ರೋಲರ್ ಜನರ್ ಅಫ್ ಇಂಡಿಯಾಗೆ ಮನವಿ ಮಾಡಲಾಗಿದೆ ಎಂದು ಹೇಳಿದರು.