Crime News: ಬಿಯರ್ ಬಾಟಲಿ ಗಾಜಿನಿಂದ ಕುತ್ತಿಗೆ ಕೊಯ್ದು ಹೋಟೆಲ್ ಕಾರ್ಮಿಕನ ಬರ್ಬರ ಹತ್ಯೆ!

0
Spread the love

ಉಡುಪಿ:- ಬಿಯರ್ ಬಾಟಲಿ ಗಾಜಿನಿಂದ ಕುತ್ತಿಗೆ ಕೊಯ್ದು ಹೋಟೆಲ್ ಕಾರ್ಮಿಕನ ಬರ್ಬರ ಹತ್ಯೆ ಮಾಡಿರುವ ಘಟನೆ ಉಡುಪಿಯ ಮಣಿಪಾಲ ಅನಂತ ಕಲ್ಯಾಣನಗರ ಸಮೀಪ ಜರುಗಿದೆ.

Advertisement

ಮೃತರನ್ನು ಶ್ರೀಧರ್ ನಾಯಕ ಎಂದು ಗುರುತಿಸಲಾಗಿದೆ. ಮಣಿಪಾಲದ ಹೋಟೆಲ್‌ನಲ್ಲಿ ಕೆಲಸ ಮಾಡಿಕೊಂಡಿದ್ದು, ಬೆಳಗ್ಗೆ ಬಾಡಿಗೆ ಮನೆಯಿಂದ ಹೋಟೆಲ್‌ಗೆ ಹೋಗುತ್ತಿದ್ದರು ಎಂಬ ಮಾಹಿತಿಯಿದೆ. ದುಷ್ಕರ್ಮಿಗಳು ಕುತ್ತಿಗೆಯನ್ನು ಬಿಯರ್ ಬಾಟಲಿಯಿಂದ ಕೊಯ್ದು ಹತ್ಯೆ ಮಾಡಿರುವುದು ಎಂದು ಶಂಕಿಸಲಾಗಿದೆ.

ಕೊಲೆ ಯಾವ ಕಾರಣಕ್ಕೆ ನಡೆದಿದೆ ಮತ್ತು ಯಾರು ಮಾಡಿದ್ದಾರೆ ಎಂಬುದು ಇನ್ನಷ್ಟೇ ತಿಳಿದು ಬರಬೇಕಾಗಿದೆ. ಸ್ಥಳಕ್ಕೆ ಉಡುಪಿ ಎಸ್‌ಪಿ ಡಾ. ಕೆ.ಅರುಣ್ ಕುಮಾರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here