BJP ಕೇಂದ್ರ ಶಿಸ್ತು ಸಮಿತಿ ನೋಟಿಸ್ʼಗೆ ಉತ್ತರ ನೀಡಿದ ಬಸನಗೌಡ ಪಾಟೀಲ್ ಯತ್ನಾಳ್!

0
Spread the love

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಸಮರ ಸಾರಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ಗೆ ನೋಟಿಸ್ ನೀಡಲಾಗಿತ್ತು. ಇದೀಗ ಹೈಕಮಾಂಡ್ ನೀಡಿದ್ದ ನೋಟಿಸ್‌ಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ 9 ಪುಟಗಳ ಉತ್ತರ ನೀಡಿದ್ದಾರೆ.

Advertisement

ಉತ್ತರದಲ್ಲಿ ಏನಿದೆ?
ಪಕ್ಷದಲ್ಲಿ ಕುಟುಂಬ ರಾಜಕೀಯ ಮೀತಿ ಮೀರಿದೆ. ಭವಿಷ್ಯ ದೃಷ್ಟಿಯಿಂದ ಇದಕ್ಕೆ ಬ್ರೇಕ್ ಹಾಕಬೇಕು. ಕುಟುಂಬ ರಾಜಕೀಯದಿಂದ ಪಕ್ಷ ವ್ಯಕ್ತಿಗತವಾಗಿ ಗುರುತಿಸಿಕೊಳ್ಳಬಾರದು. ಬಿ.ವೈ ವಿಜಯೇಂದ್ರ ಅವರು ವ್ಯಕ್ತಿಗತ ಹಾಗೂ ಗುಂಪುಗಾರಿಕೆ ಮಾಡ್ತಿದ್ದಾರೆ. ಇದರಿಂದ ಸಂಘಟನೆಗೆ ತೊಡಕಾಗುತ್ತಿದೆ ಎಂದು ಯತ್ನಾಳ್ ಉತ್ತರದಲ್ಲಿ ದೂರಿದ್ದಾರೆ.

ಹಿರಿಯ ನಾಯಕರನ್ನು ವಿಶ್ವಾಸಕ್ಕೆ ಪಡೆದಿಲ್ಲ. ಹೊಂದಾಣಿಕೆ ರಾಜಕೀಯದಿಂದ ಪಕ್ಷ ಸಂಘಟನೆಯಲ್ಲಿ ಬಲಹೀನವಾಗಬಾರದು. ಕಾರ್ಯಕರ್ತರು ಭಾವನೆಗಳನ್ನು ನಾನು ಬಹಿರಂಗವಾಗಿ ವ್ಯಕ್ತಪಡಿಸುತ್ತಿದ್ದೇನೆ. ನನ್ನ ಹೇಳಿಕೆ ಪಕ್ಷದ ಅನೇಕ ಹಿರಿಯ ನಾಯಕರು ಹಾಗೂ ಕಾರ್ಯಕರ್ತರು ಅಭಿಪ್ರಾಯವಾಗಿದೆ. ಹೀಗಾಗಿ, ಬಿ.ವೈ ವಿಜಯೇಂದ್ರ ಅವರನ್ನು ಕೆಳಗಿಳಿಸಿ, ಸಮರ್ಥ ನಾಯಕರಿಗೆ ಜವಬ್ದಾರಿ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ವಕ್ಫ್ ಹೋರಾಟವನ್ನು ನಾವು ಪಕ್ಷದ ವೇದಿಕೆಯಲ್ಲೇ ಮಾಡಿದ್ದೇವೆ. ಈ ಹೋರಾಟಕ್ಕೆ ಕೇಂದ್ರದ ನಾಯಕರೇ ಖುದ್ದು ಶ್ಲಾಘಿಸಿದ್ದಾರೆ. ಪಕ್ಷದ ಹಿತಕ್ಕೆ ನಾವು ಕೆಲಸ ಮಾಡುತ್ತಿದ್ದೇವೆ. ಈ ಹಿಂದೆ ನೀಡಿದ ಉತ್ತರವನ್ನು ನೀವು ಪರಿಗಣಿಸಬಹುದು. ನಾನು ಶಿಸ್ತು ಉಲ್ಲಂಘಿಸಿಲ್ಲ. ಪಕ್ಷದ ಚೌಕಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.

 


Spread the love

LEAVE A REPLY

Please enter your comment!
Please enter your name here