ನಾಗೇಂದ್ರ ಬಂಧನ ಬಳಿಕ ಬಸನಗೌಡ ದದ್ದಲ್ ನಾಪತ್ತೆ!

0
Spread the love

ಬೆಂಗಳೂರು: ಮಹರ್ಷಿ ವಾಲ್ಮೀಕಿ ‌ನಿಗಮದ ಹಣ ಗುಳುಂ ಮಾಡಿರೋ ಭ್ರಷ್ಟರಲ್ಲಿ ಇ ಡಿ ಅಧಿಕಾರಿಗಳು ನಡುಕ ಹುಟ್ಟಿಸುತ್ತಿದ್ದಾರೆ. ನಿಗಮದ ಕೋಟಿ  ಕೋಟಿ ಹಣವನ್ನು ಅಕ್ರಮ ವರ್ಗಾವಣೆ ಮಾಡಿರೋ ಕದೀಮರಿಗೆ ಇ ಡಿ ಕಂಟಕ ಶುರುವಾಗಿದೆ. ಇನ್ನೂ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯದಿಂದ ಬಂಧನ ಭೀತಿ ಎದುರಿಸುತ್ತಿರುವ ಕಾಂಗ್ರೆಸ್ ಶಾಸಕ ಬಸನಗೌಡ‌ ದದ್ದಲ್ ನಾಪತ್ತೆಯಾಗಿದ್ದಾರೆ. ಸದ್ಯ ಯಲಹಂಕ ನಿವಾಸದಲ್ಲೂ ಇಲ್ಲ, ದದ್ದಲ್ ನಿವಾಸದಲ್ಲೂ ಇಲ್ಲ.

Advertisement

ವಿಚಾರಣೆ ಬಳಿಕ ಬಂಧನ ಸಾಧ್ಯತೆ ಮುನ್ಸೂಚನೆ ಸಿಕ್ಕ ಹಿನ್ನೆಲೆ ನಾಪತ್ತೆಯಾಗಿರುವ ಬಸನಗೌಡ ದದ್ದಲ್. ಇತ್ತ ಇಡಿ ಅಧಿಕಾರಿಗಳು ಬಂಧನಕ್ಕೆ ತಯಾರಿ ಮಾಡಿಕೊಂಡಿದ್ದಾರೆನ್ನಲಾಗಿದೆ. ಇನ್ನೊಂದೆಡೆ ಬಂಧನ ಕುಣಿಕೆ ಬಿಗಿಯಾಗುತ್ತಿದ್ದಂತೆ ನಾಪತ್ತೆಯಾಗಿರುವ ಬ್ಯಾಂಕ್ ಆಡಳಿತ ಮಂಡಳಿ ಸದಸ್ಯರಿಗಾಗಿ ಹುಡುಕಾಟ ನಡೆಸಿರುವ ಇಡಿ. ಯುನಿಯನ್ ಬ್ಯಾಂಕ್ ಅಧಿಕಾರಿಗಳು ಇನ್ನೂ ಪತ್ತೆಯಾಗಿಲ್ಲ. ಬ್ಯಾಂಕ್ ಅಧಿಕಾರಿಗಳಿಗಾಗಿ ಎಸ್ ಐಟಿ ,ಇಡಿ,ಸಿಬಿಐ ಮೂರು ತನಿಖಾ ತಂಡಗಳಿಂದಲೂ ಶೋಧಕಾರ್ಯ ನಡೆದಿದೆ.


Spread the love

LEAVE A REPLY

Please enter your comment!
Please enter your name here