ವಿಜಯಸಾಕ್ಷಿ ಸುದ್ದಿ, ಗದಗ: ಇಲ್ಲಿನ ಶಿವಾನಂದ ನಗರದ ಬಸವ ಸಮುದಾಯ ಭವನದಲ್ಲಿ ಸೆ. 7 ರಂದು ಬೆಳಿಗ್ಗೆ 10ಕ್ಕೆ ನಡೆಯಲಿರುವ ಬಸವದಳದ 1662ನೇ ಶರಣ ಸಂಗಮದಲ್ಲಿ ಬಸವ ಸಂಸ್ಕೃತಿ ಅಭಿಯಾನ – 2025 ಹಾಗೂ ವಿಚಾರಪತ್ನಿ ನೀಲಮ್ಮನವರ ವಚನ ಕುರಿತು ಉಪನ್ಯಾಸ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
Advertisement
ಅಧ್ಯಕ್ಷತೆಯನ್ನು ಬಸವದಳದ ಅಧ್ಯಕ್ಷ ಶರಣ ವಿ.ಕೆ. ಕರೇಗೌಡ್ರ ವಹಿಸುವರು. ಶರಣತತ್ವ ಚಿಂತಕ ಶರಣ ಎನ್.ಎಚ್. ಹಿರೇಸಕ್ಕರಗೌಡ್ರ ಉಪನ್ಯಾಸ ಮಾಡುವರು. ಬಸವದಳದ ಸದಸ್ಯರು, ಶರಣ ಸಾಹಿತ್ಯಾಭಿಮಾನಿಗಳು ಹಾಗೂ ಆಸಕ್ತರು ಭಾಗವಹಿಸಬೇಕೆಂದು ಸಂಘಟಕರ ಪರವಾಗಿ ಪ್ರಕಾಶ ಅಸುಂಡಿ ವಿನಂತಿಸಿದ್ದಾರೆ.


