ನೇಣಿಗೆ ಶರಣಾದ ಬಿಬಿಎಂಪಿ ವರ್ಕರ್: ಮಹಿಳೆಯ ಆತ್ಮಹತ್ಯೆಗೆ ಕಾರಣ?

0
Spread the love

ಬೆಂಗಳೂರು:- ಬಿಬಿಎಂಪಿ ಕಚೇರಿಯಲ್ಲಿ ಕೆಲಸ ಮಾಡ್ತಿದ್ದ ಮಹಿಳೆಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಾಮರಾಜಪೇಟೆಯಲ್ಲಿ ಜರುಗಿದೆ. ಇನ್ನೂ ಘಟನೆಗೆ ವ್ಯಕ್ತಿಯೊಬ್ಬನ ಕಿರುಕುಳ ಕಾರಣ ಎಂಬ ಆರೋಪ ಕೇಳಿ ಬಂದಿದೆ.

Advertisement

32 ವರ್ಷದ ನಂದಿನಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಫೆ.23ರ ರಾತ್ರಿ 9:30ರ ವೇಳೆಗೆ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಮನೆಯಲ್ಲಿ ಯಾರೂ ಇಲ್ಲದಾಗ ನೇಣು ಬಿಗಿದುಕೊಂಡು ನಂದಿನಿ ಅತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನು ನೋಡಿ ಪೊಲೀಸರು ಬರುವ ಮುನ್ನವೇ ಕುಟುಂಬಸ್ಥರು ಮೃತದೇಹ ಕೆಳಗೆ ಇಳಿಸಿದ್ದಾರೆ.

ಇನ್ನೂ ನಂದಿನಿ ಅವರು, 8 ವರ್ಷಗಳ ಹಿಂದೆ ಸೂರ್ಯ ಎಂಬಾತನೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ದಂಪತಿಗೆ ಒಂದು ಹೆಣ್ಣು ಮತ್ತು ಒಂದು ಗಂಡು ಮಗು ಇದೆ. ನಂದಿನಿಗೆ ವ್ಯಕ್ತಿಯೊಬ್ಬ ಆಗಾಗ್ಗೆ ಫೋನ್‌ ಮಾಡಿ ಕಿರಿಕುಳ ನೀಡುತ್ತಿದ್ದ ಎಂಬ ಆರೋಪ ಕೇಳಿಬಂದಿದೆ. ಇದರಿಂದಾಗಿ ಪತಿ-ಪತ್ನಿ ನಡುವೆ ಆಗಾಗ್ಗೆ ಗಲಾಟೆ ನಡೆಯುತ್ತಿತ್ತು. ವ್ಯಕ್ತಿಯ ನಿರಂತರ ಕಿರುಕುಳದಿಂದ ಮನನೊಂದಿದ್ದ ನಂದಿನಿ ಆತ್ಮಹತ್ಯೆ ಮಾಡಿಕೊಂದಿದ್ದಾರೆ ಎಂದು ಪೊಲೀಸ್ ಮೂಲಗಳು ಹೇಳಿವೆ.


Spread the love

LEAVE A REPLY

Please enter your comment!
Please enter your name here